ಜಿಲ್ಲೆಗಳು

BRT ಹುಲಿ ಸಂರಕ್ಷಿತ ಪ್ರದೇಶದ ‘ಝಾನ್ಸಿ’ ಶ್ವಾನ ಸಾವು

ಚಾಮರಾಜನಗರ: ಅರಣ್ಯ ಅಪರಾಧಗಳ ಪತ್ತೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ‌ಲ್ಲಿ ನಿಯೋಜಿಸಲಾಗಿದ್ದ ತರಬೇತಿ ಪಡೆದ ಶ್ವಾನ ಝಾನ್ಸಿ ವಾರದ ಹಿಂದೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದೆ. 

ಡಿ.30ರಂದೇ ಘಟನೆ ನಡೆದಿದ್ದರೂ, ಮಾಹಿತಿ ಬಹಿರಂಗಗೊಂಡಿರಲಿಲ್ಲ. ಶ್ವಾನವನ್ನು ಪುಣಜನೂರಿನಲ್ಲಿ ನಿಯೋಜಿಸಲಾಗಿತ್ತು. ತರಬೇತಿ ಪಡೆದು ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ನಾಯೊಂದನ್ನು ಬೆನ್ನಟ್ಟಿಕೊಂಡು ಹೋದಾಗ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಚಾಮರಾಜನಗರದ ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಜರ್ಮನ್‌ ಶೆಫರ್ಡ್‌ ತಳಿಯಹೆಣ್ಣು ಶ್ವಾನವನ್ನು 2021ರ ನವೆಂಬರ್‌ 25ರಂದು ಅರಣ್ಯ ಇಲಾಖೆಗೆ ಸೇರ್ಪಡೆಗೊಳಿಸಲಾಗಿತ್ತು. ಆಗ ಅದಕ್ಕೆ ಒಂಬತ್ತು ತಿಂಗಳು ವಯಸ್ಸಾಗಿತ್ತು.

ಟ್ರಾಫಿಕ್‌ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಕಾರದೊಂದಿಗೆ ‌ಝಾನ್ಸಿಯನ್ನು ಇಲಾಖೆಯ ಸೇವೆಗೆ ನಿಯೋಜಿಸಲಾಗಿತ್ತು. ಇದಕ್ಕೂ ಮೊದಲು ಏಳು ತಿಂಗಳ ಕಾಲ ಚಂಡೀಗಡದ ಐಟಿಬಿಪಿ ತರಬೇತಿ ಕೇಂದ್ರದಲ್ಲಿ ಅಪರಾಧ ಪತ್ತೆಗೆ ಸಂಬಂಧಿಸಿದ ತರಬೇತಿಯನ್ನು ಅದಕ್ಕೆ ನೀಡಲಾಗಿತ್ತು.

ಅರಣ್ಯ ಇಲಾಖೆಗೆ ಸೇರ್ಪಡೆಗೊಂಡ ಬಳಿಕ ಯಾವುದೇ ಕಾರ್ಯಾಚರಣೆಗಳಲ್ಲಿ ಶ್ವಾನ ಭಾಗವಹಿಸಿರಲಿಲ್ಲ.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

9 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

11 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

13 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

13 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

14 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

15 hours ago