ಜಿಲ್ಲೆಗಳು

BRT ಹುಲಿ ಸಂರಕ್ಷಿತ ಪ್ರದೇಶದ ‘ಝಾನ್ಸಿ’ ಶ್ವಾನ ಸಾವು

ಚಾಮರಾಜನಗರ: ಅರಣ್ಯ ಅಪರಾಧಗಳ ಪತ್ತೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ‌ಲ್ಲಿ ನಿಯೋಜಿಸಲಾಗಿದ್ದ ತರಬೇತಿ ಪಡೆದ ಶ್ವಾನ ಝಾನ್ಸಿ ವಾರದ ಹಿಂದೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದೆ. 

ಡಿ.30ರಂದೇ ಘಟನೆ ನಡೆದಿದ್ದರೂ, ಮಾಹಿತಿ ಬಹಿರಂಗಗೊಂಡಿರಲಿಲ್ಲ. ಶ್ವಾನವನ್ನು ಪುಣಜನೂರಿನಲ್ಲಿ ನಿಯೋಜಿಸಲಾಗಿತ್ತು. ತರಬೇತಿ ಪಡೆದು ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ನಾಯೊಂದನ್ನು ಬೆನ್ನಟ್ಟಿಕೊಂಡು ಹೋದಾಗ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಚಾಮರಾಜನಗರದ ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಜರ್ಮನ್‌ ಶೆಫರ್ಡ್‌ ತಳಿಯಹೆಣ್ಣು ಶ್ವಾನವನ್ನು 2021ರ ನವೆಂಬರ್‌ 25ರಂದು ಅರಣ್ಯ ಇಲಾಖೆಗೆ ಸೇರ್ಪಡೆಗೊಳಿಸಲಾಗಿತ್ತು. ಆಗ ಅದಕ್ಕೆ ಒಂಬತ್ತು ತಿಂಗಳು ವಯಸ್ಸಾಗಿತ್ತು.

ಟ್ರಾಫಿಕ್‌ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಕಾರದೊಂದಿಗೆ ‌ಝಾನ್ಸಿಯನ್ನು ಇಲಾಖೆಯ ಸೇವೆಗೆ ನಿಯೋಜಿಸಲಾಗಿತ್ತು. ಇದಕ್ಕೂ ಮೊದಲು ಏಳು ತಿಂಗಳ ಕಾಲ ಚಂಡೀಗಡದ ಐಟಿಬಿಪಿ ತರಬೇತಿ ಕೇಂದ್ರದಲ್ಲಿ ಅಪರಾಧ ಪತ್ತೆಗೆ ಸಂಬಂಧಿಸಿದ ತರಬೇತಿಯನ್ನು ಅದಕ್ಕೆ ನೀಡಲಾಗಿತ್ತು.

ಅರಣ್ಯ ಇಲಾಖೆಗೆ ಸೇರ್ಪಡೆಗೊಂಡ ಬಳಿಕ ಯಾವುದೇ ಕಾರ್ಯಾಚರಣೆಗಳಲ್ಲಿ ಶ್ವಾನ ಭಾಗವಹಿಸಿರಲಿಲ್ಲ.

andolanait

Recent Posts

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

4 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

4 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

11 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

11 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

11 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

11 hours ago