ಜಿಲ್ಲೆಗಳು

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ : ಕಾಡುಪ್ರಾಣಿಗಳ ದಾಳಿ ತಡೆಗೆ ಕ್ಷಿಪ್ರ ಕಾರ್ಯಪಡೆ

* ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ
* ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಮುನ್ನೇಚ್ಚರಿಕೆ

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಆರ್‌ಟಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕ್ಷಿಪ್ರ ಕಾರ್ಯಾಪಡೆ ರಚಿಸಿ ನಿಯೋಜಿಸಲಾಗಿದೆ.
ಸಂರಕ್ಷಿತಾರಣ್ಯದ ಅಂಚಿನಲ್ಲಿ ರೈತರು ಬೆಳೆದಿರುವ ಕಬ್ಬು, ಬಾಳೆ, ಭತ್ತ, ರಾಗಿ, ಜೋಳ ಮುಂತಾದ ಬೆಳೆಗಳು ಕಟಾವಿಗೆ ಬಂದಿವೆ. ಬೆಳೆಗಳಿಂದ ಕಾಡು ಪ್ರಾಣಿಗಳು ಆಕರ್ಷಿತವಾಗಿ ಕಾಡಿನಿಂದ ಹೊರಗೆ ಬರುವುದನ್ನು ತಡೆಗಟ್ಟಲು, ಬೆಳೆ ಹಾನಿ ಆಗದಂತೆ ತಡೆಯುವುದು ಕಾರ್ಯಪಡೆಯ ಉದ್ದೇಶವಾಗಿದೆ.
ಕಾಡಂಚಿನ ಗ್ರಾಮಗಳ ಜನರಿಗೆ ಕಾರ್ಯಪಡೆ ಸಿಬ್ಬಂದಿ ಈಗಾಗಲೇ ಕರಪತ್ರಗಳನ್ನು ಹಂಚಿಕೆ ಮಾಡಿ ಅರಿವು ಮೂಡಿಸುವ ಕಾರ್ಯ ಕೈಗೊಂಡಿದೆ. ಅಲ್ಲದೆ ಅರಣ್ಯ ಸಹಾಯವಾಣಿ ೧೯೨೬ಕ್ಕೆ ಕರೆ ಮಾಡಿ ಸಂಪರ್ಕಿಸಿ ಎಂದು ಮನವರಿಕೆ ಮಾಡುತ್ತಿದ್ದಾರೆ.
ಕಾಡಾನೆ, ಹುಲಿ, ಚಿರತೆ, ಕರಡಿಗÀಳು ಜನವಸತಿ ಪ್ರದೇಶದಲ್ಲಿ ಕಂಡು ಬಂದಾಗ ತುರ್ತಾಗಿ ಹತ್ತಿರದ ಅರಣ್ಯ ಇಲಾಖೆಯ ಕಚೇರಿಗೆ ಮಾಹಿತಿ ನೀಡಬೇಕು.
ಕಾಡಾನೆಗಳು ಜನವಸತಿ ಪ್ರದೇಶದಲ್ಲಿ ಕಂಡಾಗ ಹೆಚ್ಚು ಜನ ಸೇರಿದಲ್ಲಿ ಆನೆಗಳು ಗಾಬರಿಗೊಂಡು ತೊಂದರೆ ಮಾಡುವ ಸಂಭವವಿರುತ್ತದೆ. ಅನಾವಶ್ಯಕವಾಗಿ ಕಾಡಾನೆಗಳ ಸುತ್ತ ಜನ ಗುಂಪು ಸೇರಬಾರದು. ವನ್ಯಪ್ರಾಣಿಗಳಿಂದ ಜನರು ಆದಷ್ಟು ದೂರವಿರಬೇಕು.
ವನ್ಯಪ್ರಾಣಿಗಳಿಗೆ ತೊಂದರೆಯಾಗುವ ಪಟಾಕಿ ಸಿಡಿಸುವುದು, ಗುಂಡು ಹಾರಿಸುವುದು, ಬೆಂಕಿ
ಜ್ವಾಲೆ ಎಸೆಯುವುದು, ಕಲ್ಲುಗಳನ್ನು ಎಸೆಯುವಂತಹ ಯಾವುದೇ ವರ್ತನೆಗಳನ್ನು ಜನರು ಮಾಡಬಾರದು ಎಂದು ಕರಪತ್ರದಲ್ಲಿ ಮುದ್ರಿಸಲಾಗಿದೆ.
ಈ ಸಂಬAಧ ಭಿತ್ತಿಪತ್ರಗಳನ್ನು ಅರಣ್ಯದ ರಸ್ತೆಗಳಲ್ಲಿ ಹೆಚ್ಚು ಜನರು ಓಡಾಡುವ ಸ್ಥಳಗಳಲ್ಲಿ ಅಂಟಿಸಲಾಗಿದೆ. ಸಂರಕ್ಷಿತಾರಣ್ಯದ ೬ ವಲಯಗಳ ಅಧಿಕಾರಿಗಳ ಮೊ.ಸಂಖ್ಯೆಗಳನ್ನು ನೀಡಲಾಗಿದೆ.

ಅರಣ್ಯಾಧಿಕಾರಿಗಳ ಸಂಪರ್ಕ ಸಂಖ್ಯೆ

ಚಾ.ನಗರ ಪ್ರಾದೇಶಿಕ ವಲಯ : ಉಪ ವಲಯ ಅರಣ್ಯಾಧಿಕಾರಿ ಆರ್. ಚಂದ್ರಕುಮಾರ್ (೯೪೫೬೦೩೭೯೪೪), ಉಪ ವಲಯ ಅರಣ್ಯಾಧಿಕಾರಿ ಸಿ. ಹರ್ಷ (೮೧೪೭೫೮೩೬೪೫), ಉಪ ವಲಯ ಅರಣ್ಯಾಧಿಕಾರಿ ಅಮರನಾಥ್ (೯೪೮೩೯೦೭೭೯೫)
ಕೊಳೇಗಾಲ ವಲಯ : ಗುಂಡಾಲ್ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಿ. ಪ್ರಭುಸ್ವಾಮಿ ಮೊ.ಸಂ ೯೭೩೧೦೨೫೬೫೭, ಅರೇಪಾಳ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಎಂ. ಮಹೇಶ ಮೊ.ಸಂ ೯೦೦೮೮೭೭೪೯೨
ಬೈಲೂರು ವಲಯ : ಉಪ ವಲಯ ಅರಣ್ಯಾಧಿಕಾರಿ ಎಂ. ರವಿಕುಮಾರ್ (೮೬೬೦೩೫೧೪೦೫), ಉಪ ವಲಯ ಅರಣ್ಯಾಧಿಕಾರಿ ಎನ್. ಗಿರೀಶ್ (೮೧೦೫೪೬೨೧೫೦)
ಕೆ.ಗುಡಿ ವಲಯ : ಉಪ ವಲಯ ಅರಣ್ಯಾಧಿಕಾರಿ ಸೈಯದ್ ಇಕ್ರಂಪಾಷಾ (೯೯೦೧೨೩೬೨೫೩), ಉಪ ವಲಯ ಅರಣ್ಯಾಧಿಕಾರಿ ಕೆ. ಮಂಜುನಾಥ (೮೧೪೭೫೮೩೬೪೫), ಉಪ ವಲಯ ಅರಣ್ಯಾಧಿಕಾರಿ ಸಿ. ಸದಾಶಿವಂ (೯೪೮೩೯೦೭೭೯೫).
ಪುಣಜನೂರು ವಲಯ : ಬೂದಿಪಡಗ ಶಾಖೆಯ ಉಪವಲಯ ಅರಣ್ಯಾಧಿಕಾರಿ ಕೃಷ್ಣಮೂರ್ತಿ (೮೯೪೫೯೮೯೯೭೩)
ಯಳಂದೂರು ವಲಯ : ಗುಂಬಳ್ಳಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಪಿ.ರಮೇಶ (೯೯೦೦೮೮೮೩೧೩), ಪುರಾಣಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಪುನೀತ್ (೯೯೪೫೧೫೪೫೮೪),

andolanait

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

2 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

2 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

2 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

2 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

2 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

3 hours ago