ಜಿಲ್ಲೆಗಳು

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ : ಕಾಡುಪ್ರಾಣಿಗಳ ದಾಳಿ ತಡೆಗೆ ಕ್ಷಿಪ್ರ ಕಾರ್ಯಪಡೆ

* ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ
* ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಮುನ್ನೇಚ್ಚರಿಕೆ

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಆರ್‌ಟಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕ್ಷಿಪ್ರ ಕಾರ್ಯಾಪಡೆ ರಚಿಸಿ ನಿಯೋಜಿಸಲಾಗಿದೆ.
ಸಂರಕ್ಷಿತಾರಣ್ಯದ ಅಂಚಿನಲ್ಲಿ ರೈತರು ಬೆಳೆದಿರುವ ಕಬ್ಬು, ಬಾಳೆ, ಭತ್ತ, ರಾಗಿ, ಜೋಳ ಮುಂತಾದ ಬೆಳೆಗಳು ಕಟಾವಿಗೆ ಬಂದಿವೆ. ಬೆಳೆಗಳಿಂದ ಕಾಡು ಪ್ರಾಣಿಗಳು ಆಕರ್ಷಿತವಾಗಿ ಕಾಡಿನಿಂದ ಹೊರಗೆ ಬರುವುದನ್ನು ತಡೆಗಟ್ಟಲು, ಬೆಳೆ ಹಾನಿ ಆಗದಂತೆ ತಡೆಯುವುದು ಕಾರ್ಯಪಡೆಯ ಉದ್ದೇಶವಾಗಿದೆ.
ಕಾಡಂಚಿನ ಗ್ರಾಮಗಳ ಜನರಿಗೆ ಕಾರ್ಯಪಡೆ ಸಿಬ್ಬಂದಿ ಈಗಾಗಲೇ ಕರಪತ್ರಗಳನ್ನು ಹಂಚಿಕೆ ಮಾಡಿ ಅರಿವು ಮೂಡಿಸುವ ಕಾರ್ಯ ಕೈಗೊಂಡಿದೆ. ಅಲ್ಲದೆ ಅರಣ್ಯ ಸಹಾಯವಾಣಿ ೧೯೨೬ಕ್ಕೆ ಕರೆ ಮಾಡಿ ಸಂಪರ್ಕಿಸಿ ಎಂದು ಮನವರಿಕೆ ಮಾಡುತ್ತಿದ್ದಾರೆ.
ಕಾಡಾನೆ, ಹುಲಿ, ಚಿರತೆ, ಕರಡಿಗÀಳು ಜನವಸತಿ ಪ್ರದೇಶದಲ್ಲಿ ಕಂಡು ಬಂದಾಗ ತುರ್ತಾಗಿ ಹತ್ತಿರದ ಅರಣ್ಯ ಇಲಾಖೆಯ ಕಚೇರಿಗೆ ಮಾಹಿತಿ ನೀಡಬೇಕು.
ಕಾಡಾನೆಗಳು ಜನವಸತಿ ಪ್ರದೇಶದಲ್ಲಿ ಕಂಡಾಗ ಹೆಚ್ಚು ಜನ ಸೇರಿದಲ್ಲಿ ಆನೆಗಳು ಗಾಬರಿಗೊಂಡು ತೊಂದರೆ ಮಾಡುವ ಸಂಭವವಿರುತ್ತದೆ. ಅನಾವಶ್ಯಕವಾಗಿ ಕಾಡಾನೆಗಳ ಸುತ್ತ ಜನ ಗುಂಪು ಸೇರಬಾರದು. ವನ್ಯಪ್ರಾಣಿಗಳಿಂದ ಜನರು ಆದಷ್ಟು ದೂರವಿರಬೇಕು.
ವನ್ಯಪ್ರಾಣಿಗಳಿಗೆ ತೊಂದರೆಯಾಗುವ ಪಟಾಕಿ ಸಿಡಿಸುವುದು, ಗುಂಡು ಹಾರಿಸುವುದು, ಬೆಂಕಿ
ಜ್ವಾಲೆ ಎಸೆಯುವುದು, ಕಲ್ಲುಗಳನ್ನು ಎಸೆಯುವಂತಹ ಯಾವುದೇ ವರ್ತನೆಗಳನ್ನು ಜನರು ಮಾಡಬಾರದು ಎಂದು ಕರಪತ್ರದಲ್ಲಿ ಮುದ್ರಿಸಲಾಗಿದೆ.
ಈ ಸಂಬAಧ ಭಿತ್ತಿಪತ್ರಗಳನ್ನು ಅರಣ್ಯದ ರಸ್ತೆಗಳಲ್ಲಿ ಹೆಚ್ಚು ಜನರು ಓಡಾಡುವ ಸ್ಥಳಗಳಲ್ಲಿ ಅಂಟಿಸಲಾಗಿದೆ. ಸಂರಕ್ಷಿತಾರಣ್ಯದ ೬ ವಲಯಗಳ ಅಧಿಕಾರಿಗಳ ಮೊ.ಸಂಖ್ಯೆಗಳನ್ನು ನೀಡಲಾಗಿದೆ.

ಅರಣ್ಯಾಧಿಕಾರಿಗಳ ಸಂಪರ್ಕ ಸಂಖ್ಯೆ

ಚಾ.ನಗರ ಪ್ರಾದೇಶಿಕ ವಲಯ : ಉಪ ವಲಯ ಅರಣ್ಯಾಧಿಕಾರಿ ಆರ್. ಚಂದ್ರಕುಮಾರ್ (೯೪೫೬೦೩೭೯೪೪), ಉಪ ವಲಯ ಅರಣ್ಯಾಧಿಕಾರಿ ಸಿ. ಹರ್ಷ (೮೧೪೭೫೮೩೬೪೫), ಉಪ ವಲಯ ಅರಣ್ಯಾಧಿಕಾರಿ ಅಮರನಾಥ್ (೯೪೮೩೯೦೭೭೯೫)
ಕೊಳೇಗಾಲ ವಲಯ : ಗುಂಡಾಲ್ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಿ. ಪ್ರಭುಸ್ವಾಮಿ ಮೊ.ಸಂ ೯೭೩೧೦೨೫೬೫೭, ಅರೇಪಾಳ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಎಂ. ಮಹೇಶ ಮೊ.ಸಂ ೯೦೦೮೮೭೭೪೯೨
ಬೈಲೂರು ವಲಯ : ಉಪ ವಲಯ ಅರಣ್ಯಾಧಿಕಾರಿ ಎಂ. ರವಿಕುಮಾರ್ (೮೬೬೦೩೫೧೪೦೫), ಉಪ ವಲಯ ಅರಣ್ಯಾಧಿಕಾರಿ ಎನ್. ಗಿರೀಶ್ (೮೧೦೫೪೬೨೧೫೦)
ಕೆ.ಗುಡಿ ವಲಯ : ಉಪ ವಲಯ ಅರಣ್ಯಾಧಿಕಾರಿ ಸೈಯದ್ ಇಕ್ರಂಪಾಷಾ (೯೯೦೧೨೩೬೨೫೩), ಉಪ ವಲಯ ಅರಣ್ಯಾಧಿಕಾರಿ ಕೆ. ಮಂಜುನಾಥ (೮೧೪೭೫೮೩೬೪೫), ಉಪ ವಲಯ ಅರಣ್ಯಾಧಿಕಾರಿ ಸಿ. ಸದಾಶಿವಂ (೯೪೮೩೯೦೭೭೯೫).
ಪುಣಜನೂರು ವಲಯ : ಬೂದಿಪಡಗ ಶಾಖೆಯ ಉಪವಲಯ ಅರಣ್ಯಾಧಿಕಾರಿ ಕೃಷ್ಣಮೂರ್ತಿ (೮೯೪೫೯೮೯೯೭೩)
ಯಳಂದೂರು ವಲಯ : ಗುಂಬಳ್ಳಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಪಿ.ರಮೇಶ (೯೯೦೦೮೮೮೩೧೩), ಪುರಾಣಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಪುನೀತ್ (೯೯೪೫೧೫೪೫೮೪),

andolanait

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

2 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

6 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

6 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

6 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

7 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

7 hours ago