ಜಿಲ್ಲೆಗಳು

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ : ಕಾಡುಪ್ರಾಣಿಗಳ ದಾಳಿ ತಡೆಗೆ ಕ್ಷಿಪ್ರ ಕಾರ್ಯಪಡೆ

* ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ
* ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಮುನ್ನೇಚ್ಚರಿಕೆ

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಆರ್‌ಟಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕ್ಷಿಪ್ರ ಕಾರ್ಯಾಪಡೆ ರಚಿಸಿ ನಿಯೋಜಿಸಲಾಗಿದೆ.
ಸಂರಕ್ಷಿತಾರಣ್ಯದ ಅಂಚಿನಲ್ಲಿ ರೈತರು ಬೆಳೆದಿರುವ ಕಬ್ಬು, ಬಾಳೆ, ಭತ್ತ, ರಾಗಿ, ಜೋಳ ಮುಂತಾದ ಬೆಳೆಗಳು ಕಟಾವಿಗೆ ಬಂದಿವೆ. ಬೆಳೆಗಳಿಂದ ಕಾಡು ಪ್ರಾಣಿಗಳು ಆಕರ್ಷಿತವಾಗಿ ಕಾಡಿನಿಂದ ಹೊರಗೆ ಬರುವುದನ್ನು ತಡೆಗಟ್ಟಲು, ಬೆಳೆ ಹಾನಿ ಆಗದಂತೆ ತಡೆಯುವುದು ಕಾರ್ಯಪಡೆಯ ಉದ್ದೇಶವಾಗಿದೆ.
ಕಾಡಂಚಿನ ಗ್ರಾಮಗಳ ಜನರಿಗೆ ಕಾರ್ಯಪಡೆ ಸಿಬ್ಬಂದಿ ಈಗಾಗಲೇ ಕರಪತ್ರಗಳನ್ನು ಹಂಚಿಕೆ ಮಾಡಿ ಅರಿವು ಮೂಡಿಸುವ ಕಾರ್ಯ ಕೈಗೊಂಡಿದೆ. ಅಲ್ಲದೆ ಅರಣ್ಯ ಸಹಾಯವಾಣಿ ೧೯೨೬ಕ್ಕೆ ಕರೆ ಮಾಡಿ ಸಂಪರ್ಕಿಸಿ ಎಂದು ಮನವರಿಕೆ ಮಾಡುತ್ತಿದ್ದಾರೆ.
ಕಾಡಾನೆ, ಹುಲಿ, ಚಿರತೆ, ಕರಡಿಗÀಳು ಜನವಸತಿ ಪ್ರದೇಶದಲ್ಲಿ ಕಂಡು ಬಂದಾಗ ತುರ್ತಾಗಿ ಹತ್ತಿರದ ಅರಣ್ಯ ಇಲಾಖೆಯ ಕಚೇರಿಗೆ ಮಾಹಿತಿ ನೀಡಬೇಕು.
ಕಾಡಾನೆಗಳು ಜನವಸತಿ ಪ್ರದೇಶದಲ್ಲಿ ಕಂಡಾಗ ಹೆಚ್ಚು ಜನ ಸೇರಿದಲ್ಲಿ ಆನೆಗಳು ಗಾಬರಿಗೊಂಡು ತೊಂದರೆ ಮಾಡುವ ಸಂಭವವಿರುತ್ತದೆ. ಅನಾವಶ್ಯಕವಾಗಿ ಕಾಡಾನೆಗಳ ಸುತ್ತ ಜನ ಗುಂಪು ಸೇರಬಾರದು. ವನ್ಯಪ್ರಾಣಿಗಳಿಂದ ಜನರು ಆದಷ್ಟು ದೂರವಿರಬೇಕು.
ವನ್ಯಪ್ರಾಣಿಗಳಿಗೆ ತೊಂದರೆಯಾಗುವ ಪಟಾಕಿ ಸಿಡಿಸುವುದು, ಗುಂಡು ಹಾರಿಸುವುದು, ಬೆಂಕಿ
ಜ್ವಾಲೆ ಎಸೆಯುವುದು, ಕಲ್ಲುಗಳನ್ನು ಎಸೆಯುವಂತಹ ಯಾವುದೇ ವರ್ತನೆಗಳನ್ನು ಜನರು ಮಾಡಬಾರದು ಎಂದು ಕರಪತ್ರದಲ್ಲಿ ಮುದ್ರಿಸಲಾಗಿದೆ.
ಈ ಸಂಬAಧ ಭಿತ್ತಿಪತ್ರಗಳನ್ನು ಅರಣ್ಯದ ರಸ್ತೆಗಳಲ್ಲಿ ಹೆಚ್ಚು ಜನರು ಓಡಾಡುವ ಸ್ಥಳಗಳಲ್ಲಿ ಅಂಟಿಸಲಾಗಿದೆ. ಸಂರಕ್ಷಿತಾರಣ್ಯದ ೬ ವಲಯಗಳ ಅಧಿಕಾರಿಗಳ ಮೊ.ಸಂಖ್ಯೆಗಳನ್ನು ನೀಡಲಾಗಿದೆ.

ಅರಣ್ಯಾಧಿಕಾರಿಗಳ ಸಂಪರ್ಕ ಸಂಖ್ಯೆ

ಚಾ.ನಗರ ಪ್ರಾದೇಶಿಕ ವಲಯ : ಉಪ ವಲಯ ಅರಣ್ಯಾಧಿಕಾರಿ ಆರ್. ಚಂದ್ರಕುಮಾರ್ (೯೪೫೬೦೩೭೯೪೪), ಉಪ ವಲಯ ಅರಣ್ಯಾಧಿಕಾರಿ ಸಿ. ಹರ್ಷ (೮೧೪೭೫೮೩೬೪೫), ಉಪ ವಲಯ ಅರಣ್ಯಾಧಿಕಾರಿ ಅಮರನಾಥ್ (೯೪೮೩೯೦೭೭೯೫)
ಕೊಳೇಗಾಲ ವಲಯ : ಗುಂಡಾಲ್ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಿ. ಪ್ರಭುಸ್ವಾಮಿ ಮೊ.ಸಂ ೯೭೩೧೦೨೫೬೫೭, ಅರೇಪಾಳ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಎಂ. ಮಹೇಶ ಮೊ.ಸಂ ೯೦೦೮೮೭೭೪೯೨
ಬೈಲೂರು ವಲಯ : ಉಪ ವಲಯ ಅರಣ್ಯಾಧಿಕಾರಿ ಎಂ. ರವಿಕುಮಾರ್ (೮೬೬೦೩೫೧೪೦೫), ಉಪ ವಲಯ ಅರಣ್ಯಾಧಿಕಾರಿ ಎನ್. ಗಿರೀಶ್ (೮೧೦೫೪೬೨೧೫೦)
ಕೆ.ಗುಡಿ ವಲಯ : ಉಪ ವಲಯ ಅರಣ್ಯಾಧಿಕಾರಿ ಸೈಯದ್ ಇಕ್ರಂಪಾಷಾ (೯೯೦೧೨೩೬೨೫೩), ಉಪ ವಲಯ ಅರಣ್ಯಾಧಿಕಾರಿ ಕೆ. ಮಂಜುನಾಥ (೮೧೪೭೫೮೩೬೪೫), ಉಪ ವಲಯ ಅರಣ್ಯಾಧಿಕಾರಿ ಸಿ. ಸದಾಶಿವಂ (೯೪೮೩೯೦೭೭೯೫).
ಪುಣಜನೂರು ವಲಯ : ಬೂದಿಪಡಗ ಶಾಖೆಯ ಉಪವಲಯ ಅರಣ್ಯಾಧಿಕಾರಿ ಕೃಷ್ಣಮೂರ್ತಿ (೮೯೪೫೯೮೯೯೭೩)
ಯಳಂದೂರು ವಲಯ : ಗುಂಬಳ್ಳಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಪಿ.ರಮೇಶ (೯೯೦೦೮೮೮೩೧೩), ಪುರಾಣಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಪುನೀತ್ (೯೯೪೫೧೫೪೫೮೪),

andolanait

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

3 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

4 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

4 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

5 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

6 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

6 hours ago