ಜಿಲ್ಲೆಗಳು

ಮನೆಗಳ್ಳತನ: ಮೂವರ ಬಂಧನ

ಚಿನ್ನಾಭರಣ, ಮೂರು ಕಾರುಗಳ ವಶ; ಭಾಗಿಯಾದವರ ಬಂಧನಕ್ಕೂ ಕ್ರಮ

ಕುಶಾಲನಗರ: ಕುಶಾಲನಗರ ಠಾಣೆ ಪೊಲೀಸರು ಮೂವರು ಮನೆಗಳ್ಳರನ್ನು ಬಂಧಿಸಿದ್ದು, ಆರೋಪಿಗಳಿಂದ 12 ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣ ಮತ್ತು ಮೂರು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ ಎಂ.ಪಿ.ಖಾದರ್ ಎಂಬವರ ಪುತ್ರ ಎಂ.ಎ.ಇಬ್ರಾಹಿಂ(27), ನಾಪೋಕ್ಲು ಸಮೀಪದ ಕೊಕೇರಿ ಗ್ರಾಮದ ಸುರೇಶ್ ಎಂಬುವರ ಪುತ್ರ ಸುದೀಪ್(21) ಮತ್ತು ಮಡಿಕೇರಿಯ ಅಜಾದ್ ನಗರದ ಎಂ.ಎಂ.ಮೊಹಮ್ಮದ್ ಅವರ ಪುತ್ರ ಎಂ.ಎಂ.ವಾಸಿಂ(29) ಬಂಧಿತ ಆರೋಪಿಗಳು. ಕಳ್ಳತನದಲ್ಲಿ ಭಾಗಿಯಾಗಿದ್ದ ಇನ್ನೂ ಮೂವರನ್ನು ಬಂಧಿಸಬೇಕಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಳ್ಳತನದ ಹಣದಿಂದ ಖರೀದಿಸಿದ ಬಲೆನೋ ಕಾರು(ಕೆಎ 01 ಬಿಎಸ್‌ಎಸ್ 7724), ಮಾರುತಿ 800(ಕೆಎ 40 ಎಂ 418) ವಶಪಡಿಸಿಕೊಳ್ಳಲಾಗಿದೆ. ಇವರ ಬಂಧನದಿಂದ ಕುಶಾಲನಗರ ವ್ಯಾಪ್ತಿಯ 2, ನಾಪೋಕ್ಲು ವ್ಯಾಪ್ತಿಯ 2, ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ 1 ಪ್ರಕರಣ ಭೇದಿಸಲಾಗಿದೆ.
ಸಹಾಯಕ ಎಸ್‌ಪಿ ಕೆ.ಎಸ್.ಸುಂದರರಾಜು, ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ವೃತ್ತ ನಿರೀಕ್ಷಕ ಬಿ.ಜಿ.ಮಹೇಶ್ ಮತ್ತು ಜಿ.ಎನ್.ಶ್ರೀಕಾಂತ ಮಾರ್ಗದರ್ಶನದಲ್ಲಿ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದಲ್ಲಿ ಪಿಎಸ್‌ಐಗಳಾದ ಅಪ್ಪಾಜಿ, ಭಾರತಿ, ಶ್ರೀಧರ್, ಲೋಹಿತ್, ಎಎಸ್‌ಐ ವೆಂಕಟೇಶ್, ಗೋಪಾಲ್, ಗಣಪತಿ, ಪೇದೆಗಳಾದ ಸತೀಶ್, ಮಂಜುನಾಥ್, ದಯಾನಂದ, ನಾಗರಾಜ್, ಸುಧೀಶ್ ಕುಮಾರ್, ಪ್ರಕಾಶ್, ಪ್ರವೀಣ್, ಸಂದೇಶ್, ದಿವೇಶ್, ರಂಜಿತ್, ಗಣೇಶ್, ಸಹನಾ, ಶರ್ಮಿಳಾ, ಸಿಡಿಆರ್ ಘಟಕದ ರಾಜೇಶ್, ಗಿರೀಶ್, ಪ್ರವೀಣ್, ಚಾಲಕರಾದ ರಾಜು, ಅರುಣ್, ಯೋಗೀಶ್ ಮತ್ತು ಶೇಷಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

andolanait

Recent Posts

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

7 mins ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

1 hour ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

2 hours ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

2 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

2 hours ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

3 hours ago