ಹನೂರು :ತಮಿಳುನಾಡಿನಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರ ಖಾಸಗಿ ಬಸ್ ಅಪಘಾತ ಗೊಂಡು ಸುಮಾರ 15 ಕ್ಕೂ ಜನರು ಗಾಯಗೊಂಡಿದ್ದಾರೆ.
ಗುಜರಾತ್ ರಾಜ್ಯದಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದ ಗುಜರಾತ್ ಪ್ರವಾಸಿಗರು ತಮಿಳುನಾಡು ರಾಜ್ಯದ ಪ್ರವಾಸ ಮುಗಿಸಿ ಮಲೆ ಮಾದೇಶ್ವರ ಬೆಟ್ಟಕ್ಕೆ ಬುದುವಾರ ಬೆಳಗ್ಗೆ ಆಗಮಿಸುತ್ತಿದ್ದ ವೇಳೆ ಪಾಲರ್ ಸಮೀಪದ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಿಂಬದಿಯಿಂದ ಗುಂಡಿಗೆ ಬಿದ್ದು ಜಖಂ ಗೊಂಡಿದೆ.
ತಕ್ಷಣ ಮಲೆ ಮಾದೇಶ್ವರ ಬೆಟ್ಟ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮಲೆ ಮಾದೇಶ್ವರ ಬೆಟ್ಟ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಗಾಯಗೊಂಡಿದ್ದ 15 ಜನರನ್ನು 108 ಅಂಬುಲೆನ್ಸ್ ಮೂಲಕ ಮಲೆ ಮಾದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ. ಬಸ್ ನಲ್ಲಿ 60ಕ್ಕೂ ಹೆಚ್ಚು ಜನರು ಪ್ರಯಾಣ ಬೆಳೆಸುತ್ತಿದ್ದರು ಎನ್ನಲಾಗಿದೆ. ಉಳಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಉಳಿದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಮಲೆಮಾದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…