ಹನೂರು :ತಮಿಳುನಾಡಿನಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರ ಖಾಸಗಿ ಬಸ್ ಅಪಘಾತ ಗೊಂಡು ಸುಮಾರ 15 ಕ್ಕೂ ಜನರು ಗಾಯಗೊಂಡಿದ್ದಾರೆ.
ಗುಜರಾತ್ ರಾಜ್ಯದಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದ ಗುಜರಾತ್ ಪ್ರವಾಸಿಗರು ತಮಿಳುನಾಡು ರಾಜ್ಯದ ಪ್ರವಾಸ ಮುಗಿಸಿ ಮಲೆ ಮಾದೇಶ್ವರ ಬೆಟ್ಟಕ್ಕೆ ಬುದುವಾರ ಬೆಳಗ್ಗೆ ಆಗಮಿಸುತ್ತಿದ್ದ ವೇಳೆ ಪಾಲರ್ ಸಮೀಪದ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಿಂಬದಿಯಿಂದ ಗುಂಡಿಗೆ ಬಿದ್ದು ಜಖಂ ಗೊಂಡಿದೆ.
ತಕ್ಷಣ ಮಲೆ ಮಾದೇಶ್ವರ ಬೆಟ್ಟ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮಲೆ ಮಾದೇಶ್ವರ ಬೆಟ್ಟ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಗಾಯಗೊಂಡಿದ್ದ 15 ಜನರನ್ನು 108 ಅಂಬುಲೆನ್ಸ್ ಮೂಲಕ ಮಲೆ ಮಾದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ. ಬಸ್ ನಲ್ಲಿ 60ಕ್ಕೂ ಹೆಚ್ಚು ಜನರು ಪ್ರಯಾಣ ಬೆಳೆಸುತ್ತಿದ್ದರು ಎನ್ನಲಾಗಿದೆ. ಉಳಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಉಳಿದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಮಲೆಮಾದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…