ಎಚ್.ಎಸ್.ದಿನೇಶ್ ಕುಮಾರ್
ಮೈಸೂರು: ಮುರಿದು ಬೀಳುವ ಹಂತದಲ್ಲಿರುವ ಚಾವಣಿ… ಕುಡುಕರ ಹಾವಳಿ… ರಾತ್ರಿ ವೇಳೆ ಕಗ್ಗತ್ತಲು… ಫುಟ್ಪಾತ್ ವ್ಯಾಪಾರಿಗಳ ತಾಣ… ಮೋರಿಯ ಮೇಲೆ ತಂಗುದಾಣ… ಇದು ನಗರದ ಬಸ್ ತಂಗುದಾಣಗಳ ಸ್ಥಿತಿ.
ಬಸ್ನಲ್ಲಿ ಪ್ರಾಂಣಿಸುವವರ ಅನುಕೂಲಕ್ಕಾಗಿ ಸರ್ಕಾರ, ಜಿಲ್ಲಾಡಳಿತ, ಮುಡಾ ಹಾಗೂ ನಗರಪಾಲಿಕೆ ಅನುದಾನದಲ್ಲಿ ಬಸ್ ತಂಗುದಾಣಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಅದರ ನಿರ್ವಹಣೆಯ ಹೊಣೆಯನ್ನು ಮಾತ್ರ ಯಾರೊಬ್ಬರೂ ಹೊರಲು ಸಿದ್ಧರಿಲ್ಲ.
ಗಾಯತ್ರಿಪುರಂ, ಡಾ.ರಾಜಕುಮಾರ್ ರಸ್ತೆ, ಎನ್.ಆರ್.ಮೊಹಲ್ಲಾ, ರಾಜೀವ್ ನಗರ ಹೀಗೆ ವಿವಿಧ ಬಡಾವಣೆಗಳಲ್ಲಿ ನಿರ್ಮಾಣ ಮಾಡಲಾಗಿರುವ ತಂಗುದಾಣಗಳು ಇಂದು ಸಮಸ್ಯೆಗಳ ಆಗರವಾಗಿವೆ.
ಕುಡುಕರ ತಾಣ: ನಗರದ ಗಾಯತ್ರಿಪುರಂ ಬಳಿ ಸಂದೇಶ್ ನಾಗರಾಜ್ ಅವರು ವಿಧಾನಪರಿಷತ್ ಸದಸ್ಯರಾಗಿದ್ದಾಗ ನೀಡಿದ್ದ ಅನುದಾನದಲ್ಲಿ ನಿರ್ಮಿಸಲಾಗಿರುವ ತಂಗುದಾಣವಿದೆ. ಬೆಳಗಿನ ಹೊತ್ತು ಮಾತ್ರ ಈ ತಂಗುದಾಣ ಪ್ರಯೋಜನಕ್ಕೆ ಬರುತ್ತದೆ.
ತಂಗುದಾಣದಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ದೀಪಗಳನ್ನು ಕಿಡಿಗೇಡಿಗಳು ಕಿತ್ತುಹಾಕಿದ್ದಾರೆ. ಹೀಗಾಗಿ ಕತ್ತಲಾಗುತ್ತಿದ್ದಂತೆ ಪ್ರಯಾಣಿಕರು ಈ ತಂಗುದಾಣದತ್ತ ಸುಳಿಯುವುದಿಲ್ಲ. ಕಾರಣ ಕತ್ತಲೆಯನ್ನೇ ಬಂಡವಾಳ ಮಾಡಿಕೊಂಡ ಮದ್ಯ ವ್ಯಸನಿಗಳು ಬಿಯರ್ ಬಾಟಲಿನೊಂದಿಗೆ ಅಲ್ಲಿ ಹಾಜರಾಗುತ್ತಾರೆ. ಗಂಟೆಗಟ್ಟಲೆ ಕುಡಿಯುತ್ತಾ ಕೂರುವ ಅವರು ನಂತರ ಖಾಲಿ ಬಾಟಲಿಗಳನ್ನು ಅಲ್ಲಿಯೇ ಬಿಟ್ಟು ತೆರಳುತ್ತಾರೆ.
ಇನ್ನು ಫೌಂಟೇನ್ ವೃತ್ತದ ಬಳಿ ನಿರ್ಮಿಸಲಾಗಿರುವ ಬಸ್ ತಂಗುದಾಣಕ್ಕೆ ಪ್ರಾಂಣಿಕರು ಕಾಲಿಡುವ ಪರಿಸ್ಥಿತಿ ಇಲ್ಲ. ಏಕೆಂದರೆ, ಅಲ್ಲಿ ಜನರು ಕುಳಿತುಕೊಳ್ಳಲು ಹಾಕಿಸಿದ್ದ ಹಾಸುಗಳು ನಾಪತ್ತೆಾಂಗಿವೆ. ವಿದ್ಯುತ್ ದೀಪಗಳನ್ನು ಕಿಡಿಗೇಡಿಗಳು ಕದ್ದೊಯ್ದಿದ್ದಾರೆ.
ಇಡೀ ಬಸ್ ತಂಗುದಾಣ ತೆರೆದ ಮೋರಿಯ ಮೇಲೆ ನಿಂತಿದೆ. ಮೈಸೂರು-ಬೆಂಗಳೂರು ಮುಖ್ಯ ರಸ್ತೆಯಲ್ಲಿರುವ ಈ ತಂಗುದಾಣವನ್ನು ಉತ್ತಮ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು ಎಂಬ ಕನಿಷ್ಠ ಜ್ಞಾನವೂ ಸಂಬಂಧಿಸಿದವರಿಗೆ ಇಲ್ಲ ಎಂಬುದನ್ನು ಈ ಬಸ್ ತಂಗುದಾಣ ತೋರಿಸುತ್ತದೆ.
ಉದಯಗಿರಿ, ಶಾಂತಿನಗರ, ರಾಜೀವ್ ನಗರ, ರಾಜೇಂದ್ರ ನಗರದ ವಿವಿಧೆಡೆ ಬಸ್ ತಂಗುದಾಣಗಳು ಸುಸ್ಥಿತಿಯಲಿದ್ದರೂ ವಿದ್ಯುತ್ ದೀಪದ ಸಮಸ್ಯೆ ಮಾತ್ರ ಬಹುತೇಕ ತಂಗುದಾಣಗಳಲ್ಲಿ ಎದ್ದು ಕಾಣುತ್ತದೆ. ಈಗಲಾದರೂ ಸಂಬಂಧಿಸಿದ ಅಧಿಕಾರಿಗಳು ಬಸ್ ಪ್ರಾಂಣಿಕರ ತಂಗುದಾಣಗಳನ್ನು ಸುಸ್ಥಿತಿಯಲ್ಲಿಡಲು ಕ್ರಮ ವಹಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
‘ಆಂದೋಲನ’ದ ತಂಗುದಾಣ ಗಟ್ಟಿಮುಟ್ಟು
ನಗರದ ಶಿವಾಜಿ ರಸ್ತೆಯಲ್ಲಿ ಕಳೆದ ೧೫ ವರ್ಷಗಳ ಹಿಂದೆ ‘ಆಂದೋಲನ’ ದಿನಪತ್ರಿಕೆ ವತಿಯಿಂದ ನಿರ್ಮಿಸಲಾಗಿರುವ ಬಸ್ ತಂಗುದಾಣ ಇಂದಿಗೂ ಸುಸ್ಥಿತಿಯಲ್ಲಿದೆ. ಪ್ರಯಾಣಿಕರ ತಂಗುದಾಣದ ಗೋಡೆ ಎಲ್ಲಿಯೂ ಬಿರುಕುಬಿಟ್ಟಿಲ್ಲ. ಪಕ್ಕದಲ್ಲಿಯೇ ಮತ್ತೊಂದು ತಂಗುದಾಣ ಇದ್ದರೂ ಪ್ರಯಾಣಿಕರು ‘ಆಂದೋಲನ’ ತಂಗುದಾಣವನ್ನೇ ಹೆಚ್ಚು ಬಳಸುತ್ತಿರುವುದು ಕಂಡುಬಂತು.
ಡಾ.ರಾಜಕುಮಾರ್ ರಸ್ತೆ ಅಗಲೀಕರಣದ ನಂತರ ಈ ಪ್ರಯಾಣಿಕರ ತಂಗುದಾಣವನ್ನು ನಿರ್ಲಕ್ಷ್ಯ ಮಾಡಲಾಯಿತು. ಅಗಲೀಕರಣದ ನಂತರ ತಂಗುದಾಣವನ್ನು ಸುಸ್ಥಿತಿಗೆ ತರಬೇಕಿತ್ತು. ಆದರೂ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ. ಹೀಗಾಗಿ ಇದು ಸಾರ್ವಜನಿಕರ ಬಳಕೆಯಲ್ಲಿ ಇಲ್ಲ.-ನಯೀಂ, ಸ್ಥಳೀಯ ನಿವಾಸಿ.
ಹಲವಾರು ವರ್ಷಗಳಿಂದ ಈ ತಂಗುದಾಣ ಬಳಕೆಯಲ್ಲಿ ಇಲ್ಲ. ದಾರಿ ಹೋಕರು ಅಲ್ಲಿದ್ದ ವಿದ್ಯುತ್ ದೀಪಗಳು ಹಾಗೂ ಸಲಕರಣೆಗಳನ್ನು ಕದ್ದೊಯ್ದಿದ್ದಾರೆ. ಮೊದಲಿಗೆ ಇಲ್ಲಿ ಹತ್ತಾರು ಜನರು ಬಸ್ಗಾಗಿ ಕಾಯುತ್ತಿದ್ದರು. ಇದೀಗ ಯಾರೂ ಹೋಗದಂತಹ ವಾತಾವರಣ ಸೃಷ್ಟಿಯಾಗಿದೆ.-ಆದಿಲ್ ಪಾಷಾ, ಸ್ಥಳೀಯ ನಿವಾಸಿ.
ವ್ಯಾಪಾರಸ್ಥರು ಬೆಳಿಗ್ಗೆಯಿಂದಲೇ ಇಲ್ಲಿ ಬಂದು ಕುಳಿತುಕೊಳ್ಳುವುದರಿಂದ ಪ್ರಯಾಣಿಕರು ತಂಗುದಾಣದತ್ತ ಬರುವುದಿಲ್ಲ. ಬೀಡಿ, ಸಿಗರೇಟು ಸೇದುವವರಿಗೆ ಇದು ತಂಗುದಾಣವಾಗಿದೆ. ಸುತ್ತಲೂ ರೈಲಿಂಗ್ಸ್ ಹಾಕಿಸಿ ವಿದ್ಯುತ್ ದೀಪಗಳನ್ನು ಅಳವಡಿಸಿದಲ್ಲಿ ಜನರಿಗೆ ಅನುಕೂಲವಾಗುತ್ತದೆ.
-ಬಾಲಕೃಷ್ಣ ಸಂಗಾಪುರ, ಸ್ಥಳೀಯ ವಿನಾಸಿ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…