ಜಿಲ್ಲೆಗಳು

ಉದ್ಯಮಿ ಅಪಹರಣ ಪ್ರಕರಣ: ಆರೋಪಿಗಳ ಪತ್ತೆಗೆ ಮೂರು ತಂಡ ರಚನೆ

35 ಲಕ್ಷ ರೂ.ಗೆ ಬೇಡಿಕೆ ಇಟ್ಟು ಪಡೆದ ಅಪಹರಣಕಾರರು!

ಮೈಸೂರು: ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಕೇಂದ್ರದಲ್ಲಿ ಕಾರ್ಖಾನೆಯ ಮಾಲಿಕ ಹಾಗೂ ಪುತ್ರನ ಅಪಹರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂರು ತಂಡವನ್ನು ರಚಿಸಿದ್ದಾರೆ.
ಸೋಮವಾರ ಮಧ್ಯಾಹ್ನ 12 ಗಂಟೆಗೆ ನಡೆದ ಅಪಹರಣದ ಕುರಿತು ಹರ್ಷ ಇಂಫಕ್ಟ್ ಕಾರ್ಖಾನೆಯ ಆವರಣದಿಂದ ಮಾಲೀಕ ದೀಪಕ್‌ಕುಮಾರ್ ಕೆಡಿಯಾ ಹಾಗೂ ಅವರ ಪುತ್ರ ಹರ್ಷಕುಮಾರ್ ಕೆಡಿಯಾ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಈ ಸಂಬಂದ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ದಾಖಲಿಸಿಕೊಂಡ ನಂಜನಗೂಡು ಡಿವೈಎಸ್‌ಪಿ ಗೊವೀಂದರಾಜ ಹಾಗೂ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಅಪಹರಣಕಾರರನ್ನು ಪತ್ತೆ ಮಾಡಲು ತಂಡ ರಚಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಸೋಮವಾರ ರಾತ್ರಿ ಲಲಿತಾದ್ರಿ ಪುರದ ಬಳಿ ಅಪಹರಣಕ್ಕೊಳಗಾದ ಉದ್ಯಮಿ ದೀಪಕ್ ಹಾಗೂ ಅವರ ಪುತ್ರ ಹರ್ಷ ಅವರನ್ನು ಪತ್ತೆಹಚ್ಚಿ ಕರೆತರಲು ಯಶಸ್ವಿಯಾಗಿದ್ದಾರೆ.
ಇದೀಗ ಉದ್ಯಮಿ ಹಾಗೂ ಆತನ ಮಗನನ್ನು ಅಪಹರಣ ಮಾಡಿದ ಆರೋಪಿಗಳ ಪತ್ತೆಗಾಗಿ ವೃತ್ತ ನಿರೀಕ್ಷಕ ಶಿವನಂಜ ಶೆಟ್ಟರ ನೇತೃತ್ವದಲ್ಲಿ ವಿಶೇಷ ಪೊಲೀಸರ ತಂಡ ರಚಿಸಲಾಗಿದೆ. ಇದರ ಜೊತೆಗೆ ಜಿಲ್ಲೆಯ ಇಬ್ಬರು ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಮತ್ತೆರಡು ತಂಡಗಳನ್ನು ರಚಿಸಲಾಗಿದೆ.
ಆರೋಪಿಗಳ ಪತ್ತೆ ಕಾರ್ಯವನ್ನು ಚುರುಕುಗೊಳಿಸಿರುವ ಪೊಲೀಸರ ತಂಡ ಬೆಂಗಳೂರು, ಕೇರಳ ಸೇರಿದಂತೆ ವಿವಿದೆಡೆಗೆ ತೆರಳಿದ್ದಾರೆ. ಮತ್ತೊಂದೆಡೆ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತಂತ್ರಜ್ಞಾನದ ಮೊರೆಹೋಗಿದ್ದಾರೆ. ಇದಕ್ಕಾಗಿ ಒಂದು ತಂಡ ಶ್ರಮಿಸುತ್ತಿದೆ.
ಈ ಸಂಬಂದ ಕಾರ್ಖಾನೆಯ ಲಾರಿ ಚಾಲಕ ಹಾಗೂ ಘಟನೆಯನ್ನು ಕಣ್ಣಾರೆ ಕಂಡಿದ್ದ ಮಣಿಕಂಠಸ್ವಾಮಿ ಹೇಳಿಕೆ ನೀಡಿದ್ದು, ಸೋಮವಾರ ಮದ್ಯಾಹ್ನ 12.45 ರ ಸಮುಂದಲ್ಲಿ ಉದ್ಯಮಿ ದೀಪಕ್, ಹರ್ಷ, ಸೆಕ್ಯುರಿಟಿ ಗಾರ್ಡ್ ಪ್ರವೀಣ್, ಲೋಡರ್ ಸಂಜಯ್‌, ಮತ್ತೊಬ್ಬ ಸಂಜಯ್‌ ಎಂಬವರು ಇದ್ದೆವು.
ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ನಮಗೆ ಚಾಕು ತೋರಿಸಿ ನಾಲ್ವರನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿದರು. ನಂತರ ಅವರುಗಳು ಮಾರುತಿ ಜೆನ್ ಕಾರಿನಲ್ಲಿ ಮಾಲೀಕರು ಹಾಗೂ ಅವರ ಮಗನನ್ನು ಅಪಹರಿಸಿದರು. ಎಂದು ಹೇಳಿಕೆ ನೀಡಿದ್ದಾರೆ.
35 ಲಕ್ಷ ರೂ.ನೀಡಿದೆ: ಇದೇ ವೇಳೆ ಉದ್ಯಮಿ ದೀಪಕ್ ಪೊಲೀಸರ ಬಳಿ ಹೇಳಿಕೆ ನೀಡಿದ್ದು, ಅಪಹರಣಕಾರರು ನನ್ನ ಬಿಡುಗಡೆಗೆ 35 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ನನ್ನ ಕುಟುಂಬದವರಿಗೆ ಮಾಹಿತಿ ನೀಡಿ ಹಣವನ್ನು ತರವಂತೆ ಹೇಳಿದೆ. ನಂತರ ಅವರಿಗೆ ಹಣ ನೀಡಲಾಯಿತು. ನಂತರ ಅವರು ನನ್ನನ್ನು ಲಲಿತಾದ್ರಿಪುರದ ಬಳಿ ಬಿಟ್ಟು ಹೋದರು ಎಂದು ತಿಳಿಸಿದ್ದಾರೆ.

 

andolanait

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

9 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

13 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

13 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

13 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

13 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

13 hours ago