ಜಿಲ್ಲೆಗಳು

ಉದ್ಯಮಿ ಅಪಹರಣ ಪ್ರಕರಣ: ಆರೋಪಿಗಳ ಪತ್ತೆಗೆ ಮೂರು ತಂಡ ರಚನೆ

35 ಲಕ್ಷ ರೂ.ಗೆ ಬೇಡಿಕೆ ಇಟ್ಟು ಪಡೆದ ಅಪಹರಣಕಾರರು!

ಮೈಸೂರು: ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಕೇಂದ್ರದಲ್ಲಿ ಕಾರ್ಖಾನೆಯ ಮಾಲಿಕ ಹಾಗೂ ಪುತ್ರನ ಅಪಹರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂರು ತಂಡವನ್ನು ರಚಿಸಿದ್ದಾರೆ.
ಸೋಮವಾರ ಮಧ್ಯಾಹ್ನ 12 ಗಂಟೆಗೆ ನಡೆದ ಅಪಹರಣದ ಕುರಿತು ಹರ್ಷ ಇಂಫಕ್ಟ್ ಕಾರ್ಖಾನೆಯ ಆವರಣದಿಂದ ಮಾಲೀಕ ದೀಪಕ್‌ಕುಮಾರ್ ಕೆಡಿಯಾ ಹಾಗೂ ಅವರ ಪುತ್ರ ಹರ್ಷಕುಮಾರ್ ಕೆಡಿಯಾ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಈ ಸಂಬಂದ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ದಾಖಲಿಸಿಕೊಂಡ ನಂಜನಗೂಡು ಡಿವೈಎಸ್‌ಪಿ ಗೊವೀಂದರಾಜ ಹಾಗೂ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಅಪಹರಣಕಾರರನ್ನು ಪತ್ತೆ ಮಾಡಲು ತಂಡ ರಚಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಸೋಮವಾರ ರಾತ್ರಿ ಲಲಿತಾದ್ರಿ ಪುರದ ಬಳಿ ಅಪಹರಣಕ್ಕೊಳಗಾದ ಉದ್ಯಮಿ ದೀಪಕ್ ಹಾಗೂ ಅವರ ಪುತ್ರ ಹರ್ಷ ಅವರನ್ನು ಪತ್ತೆಹಚ್ಚಿ ಕರೆತರಲು ಯಶಸ್ವಿಯಾಗಿದ್ದಾರೆ.
ಇದೀಗ ಉದ್ಯಮಿ ಹಾಗೂ ಆತನ ಮಗನನ್ನು ಅಪಹರಣ ಮಾಡಿದ ಆರೋಪಿಗಳ ಪತ್ತೆಗಾಗಿ ವೃತ್ತ ನಿರೀಕ್ಷಕ ಶಿವನಂಜ ಶೆಟ್ಟರ ನೇತೃತ್ವದಲ್ಲಿ ವಿಶೇಷ ಪೊಲೀಸರ ತಂಡ ರಚಿಸಲಾಗಿದೆ. ಇದರ ಜೊತೆಗೆ ಜಿಲ್ಲೆಯ ಇಬ್ಬರು ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಮತ್ತೆರಡು ತಂಡಗಳನ್ನು ರಚಿಸಲಾಗಿದೆ.
ಆರೋಪಿಗಳ ಪತ್ತೆ ಕಾರ್ಯವನ್ನು ಚುರುಕುಗೊಳಿಸಿರುವ ಪೊಲೀಸರ ತಂಡ ಬೆಂಗಳೂರು, ಕೇರಳ ಸೇರಿದಂತೆ ವಿವಿದೆಡೆಗೆ ತೆರಳಿದ್ದಾರೆ. ಮತ್ತೊಂದೆಡೆ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತಂತ್ರಜ್ಞಾನದ ಮೊರೆಹೋಗಿದ್ದಾರೆ. ಇದಕ್ಕಾಗಿ ಒಂದು ತಂಡ ಶ್ರಮಿಸುತ್ತಿದೆ.
ಈ ಸಂಬಂದ ಕಾರ್ಖಾನೆಯ ಲಾರಿ ಚಾಲಕ ಹಾಗೂ ಘಟನೆಯನ್ನು ಕಣ್ಣಾರೆ ಕಂಡಿದ್ದ ಮಣಿಕಂಠಸ್ವಾಮಿ ಹೇಳಿಕೆ ನೀಡಿದ್ದು, ಸೋಮವಾರ ಮದ್ಯಾಹ್ನ 12.45 ರ ಸಮುಂದಲ್ಲಿ ಉದ್ಯಮಿ ದೀಪಕ್, ಹರ್ಷ, ಸೆಕ್ಯುರಿಟಿ ಗಾರ್ಡ್ ಪ್ರವೀಣ್, ಲೋಡರ್ ಸಂಜಯ್‌, ಮತ್ತೊಬ್ಬ ಸಂಜಯ್‌ ಎಂಬವರು ಇದ್ದೆವು.
ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ವ್ಯಕ್ತಿಗಳು ನಮಗೆ ಚಾಕು ತೋರಿಸಿ ನಾಲ್ವರನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿದರು. ನಂತರ ಅವರುಗಳು ಮಾರುತಿ ಜೆನ್ ಕಾರಿನಲ್ಲಿ ಮಾಲೀಕರು ಹಾಗೂ ಅವರ ಮಗನನ್ನು ಅಪಹರಿಸಿದರು. ಎಂದು ಹೇಳಿಕೆ ನೀಡಿದ್ದಾರೆ.
35 ಲಕ್ಷ ರೂ.ನೀಡಿದೆ: ಇದೇ ವೇಳೆ ಉದ್ಯಮಿ ದೀಪಕ್ ಪೊಲೀಸರ ಬಳಿ ಹೇಳಿಕೆ ನೀಡಿದ್ದು, ಅಪಹರಣಕಾರರು ನನ್ನ ಬಿಡುಗಡೆಗೆ 35 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ನನ್ನ ಕುಟುಂಬದವರಿಗೆ ಮಾಹಿತಿ ನೀಡಿ ಹಣವನ್ನು ತರವಂತೆ ಹೇಳಿದೆ. ನಂತರ ಅವರಿಗೆ ಹಣ ನೀಡಲಾಯಿತು. ನಂತರ ಅವರು ನನ್ನನ್ನು ಲಲಿತಾದ್ರಿಪುರದ ಬಳಿ ಬಿಟ್ಟು ಹೋದರು ಎಂದು ತಿಳಿಸಿದ್ದಾರೆ.

 

andolanait

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

6 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

8 hours ago