ಜಿಲ್ಲೆಗಳು

ವಿಶೇಷಚೇತನ ಮಕ್ಕಳು ದೇವರ ಸಮಾನ : ಸಿ.ಚಂದನ್ ಗೌಡ

ಮೈಸೂರು: ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಸಿ.ಚಂದನ್ ಗೌಡ ಅವರ ಜನುಮ ದಿನವನ್ನು ಆಚರಿಸಲಾಯಿತು.
ಸೋಮವಾರ ಬೆಳಗ್ಗೆ ಇಲ್ಲಿನ ತಿಲಕ್ ನಗರದಲ್ಲಿರುವ ವಿಶೇಷಚೇತನ ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರದ ಜೊತೆಗೆ ದಿನಬಳಕೆಗೆ ಅಗತ್ಯವಿರುವ ವಿವಿಧ ಪದಾರ್ಥಗಳು ಸೇರಿದಂತೆ ಔಷಧಗಳುಳ್ಳ ಮೆಡಿಕಲ್ ಕಿಟ್ ಅನ್ನು ಚಂದನ್ ಗೌಡರು ವಿತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ದೇವರ ಸಮಾನ.ಇಂದು ಅವರುಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಸಂತೋಷದ ಕ್ಷಣವಾಗಿದೆ. ಇಂದಿನ ದಿನ ನನ್ನ ಜೀವನದಲ್ಲಿ ಅವಿಸ್ಮರಣೀಯ ಎಂದರು.
ರೈತ ಕಲ್ಯಾಣ ಸಂಘದ ವತಿಯಿಂದ ಸೇವಾ ಕಾರ್ಯಗಳು ಮುಂದುವರೆಯಲಿದ್ದು, ಈ ಸರ್ಕಾರಿ ಶಾಲೆಗೆ ಅಗತ್ಯವಿರುವ ನೆರವು ನೀಡಲಾಗುವುದು ಹಾಗೂ ಇಲ್ಲಿನ ಮಕ್ಕಳ ಶಿಕ್ಷಣ ಮತ್ತು ಇನ್ನಿತರೆ ಸೌಲಭ್ಯಗಳನ್ನು ಒದಗಿಸುವುದಾಗಿ ಇದೇ ವೇಳೆ ನೀಡಿದರು.
ಬಳಿಕ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳಲ್ಲಿ ಅವರು ಪಾಲ್ಗೊಂಡರು.
ಶಾಲೆಯ ವ್ಯವಸ್ಥಾಪಕರಾದ ಸತೀಶ್, ಹೇಮಂತ್ ಗೌಡ, ಅಭಿ,ಸಂಜಯ್,ವೇಣು,ವಿದ್ಯಾ,ರಾಜು,ಹರೀಶ್ ಗೌಡ, ಚಂದ್ರು, ಮೂರ್ತಿ, ನವೀನ್ ಗೌಡ, ಮೋಸಿನ್, ಈರಣ್ಣ, ದಾಸೇಗೌಡ, ಸಿದ್ದಲಿಂಗು, ವಸಂತ, ನಾಗರಾಜು, ನಾಗೇಶ್, ಪುನೀತ್, ಬೇಬಿ, ಅಜ್ಗರ್, ಶಿವಶಂಕರ, ಚಂದ್ರು, ಲೋಕಿ ಚನ್ನಮಾದನಾಯಕ, ರಘು, ಶಿವು,ಸುರೇಶ್, ಮೃತ್ಯುಂಜಯ,
ಮಹೇಶ್, ಮಂಜುನಾಥ್, ಮಹದೇವು, ಶೇಖರ್, ಕುಮಾರ್, ಪುಟ್ಟರಾಜು, ಮಂಜು, ನಂಜುಂಡಸ್ವಾಮಿ, ಸದಾನಂದ್,ಲೋಕೇಶ್, ರಾಜೇಶ ಮತ್ತಿತರರು ಇದ್ದರು.

andolanait

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

9 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

10 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

10 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

11 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

11 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

12 hours ago