ಮೈಸೂರು: ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಸಿ.ಚಂದನ್ ಗೌಡ ಅವರ ಜನುಮ ದಿನವನ್ನು ಆಚರಿಸಲಾಯಿತು.
ಸೋಮವಾರ ಬೆಳಗ್ಗೆ ಇಲ್ಲಿನ ತಿಲಕ್ ನಗರದಲ್ಲಿರುವ ವಿಶೇಷಚೇತನ ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರದ ಜೊತೆಗೆ ದಿನಬಳಕೆಗೆ ಅಗತ್ಯವಿರುವ ವಿವಿಧ ಪದಾರ್ಥಗಳು ಸೇರಿದಂತೆ ಔಷಧಗಳುಳ್ಳ ಮೆಡಿಕಲ್ ಕಿಟ್ ಅನ್ನು ಚಂದನ್ ಗೌಡರು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ದೇವರ ಸಮಾನ.ಇಂದು ಅವರುಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಸಂತೋಷದ ಕ್ಷಣವಾಗಿದೆ. ಇಂದಿನ ದಿನ ನನ್ನ ಜೀವನದಲ್ಲಿ ಅವಿಸ್ಮರಣೀಯ ಎಂದರು.
ರೈತ ಕಲ್ಯಾಣ ಸಂಘದ ವತಿಯಿಂದ ಸೇವಾ ಕಾರ್ಯಗಳು ಮುಂದುವರೆಯಲಿದ್ದು, ಈ ಸರ್ಕಾರಿ ಶಾಲೆಗೆ ಅಗತ್ಯವಿರುವ ನೆರವು ನೀಡಲಾಗುವುದು ಹಾಗೂ ಇಲ್ಲಿನ ಮಕ್ಕಳ ಶಿಕ್ಷಣ ಮತ್ತು ಇನ್ನಿತರೆ ಸೌಲಭ್ಯಗಳನ್ನು ಒದಗಿಸುವುದಾಗಿ ಇದೇ ವೇಳೆ ನೀಡಿದರು.
ಬಳಿಕ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳಲ್ಲಿ ಅವರು ಪಾಲ್ಗೊಂಡರು.
ಶಾಲೆಯ ವ್ಯವಸ್ಥಾಪಕರಾದ ಸತೀಶ್, ಹೇಮಂತ್ ಗೌಡ, ಅಭಿ,ಸಂಜಯ್,ವೇಣು,ವಿದ್ಯಾ,ರಾಜು,ಹರೀಶ್ ಗೌಡ, ಚಂದ್ರು, ಮೂರ್ತಿ, ನವೀನ್ ಗೌಡ, ಮೋಸಿನ್, ಈರಣ್ಣ, ದಾಸೇಗೌಡ, ಸಿದ್ದಲಿಂಗು, ವಸಂತ, ನಾಗರಾಜು, ನಾಗೇಶ್, ಪುನೀತ್, ಬೇಬಿ, ಅಜ್ಗರ್, ಶಿವಶಂಕರ, ಚಂದ್ರು, ಲೋಕಿ ಚನ್ನಮಾದನಾಯಕ, ರಘು, ಶಿವು,ಸುರೇಶ್, ಮೃತ್ಯುಂಜಯ,
ಮಹೇಶ್, ಮಂಜುನಾಥ್, ಮಹದೇವು, ಶೇಖರ್, ಕುಮಾರ್, ಪುಟ್ಟರಾಜು, ಮಂಜು, ನಂಜುಂಡಸ್ವಾಮಿ, ಸದಾನಂದ್,ಲೋಕೇಶ್, ರಾಜೇಶ ಮತ್ತಿತರರು ಇದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…