ಮೈಸೂರು: ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಸಿ.ಚಂದನ್ ಗೌಡ ಅವರ ಜನುಮ ದಿನವನ್ನು ಆಚರಿಸಲಾಯಿತು.
ಸೋಮವಾರ ಬೆಳಗ್ಗೆ ಇಲ್ಲಿನ ತಿಲಕ್ ನಗರದಲ್ಲಿರುವ ವಿಶೇಷಚೇತನ ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರದ ಜೊತೆಗೆ ದಿನಬಳಕೆಗೆ ಅಗತ್ಯವಿರುವ ವಿವಿಧ ಪದಾರ್ಥಗಳು ಸೇರಿದಂತೆ ಔಷಧಗಳುಳ್ಳ ಮೆಡಿಕಲ್ ಕಿಟ್ ಅನ್ನು ಚಂದನ್ ಗೌಡರು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ದೇವರ ಸಮಾನ.ಇಂದು ಅವರುಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಸಂತೋಷದ ಕ್ಷಣವಾಗಿದೆ. ಇಂದಿನ ದಿನ ನನ್ನ ಜೀವನದಲ್ಲಿ ಅವಿಸ್ಮರಣೀಯ ಎಂದರು.
ರೈತ ಕಲ್ಯಾಣ ಸಂಘದ ವತಿಯಿಂದ ಸೇವಾ ಕಾರ್ಯಗಳು ಮುಂದುವರೆಯಲಿದ್ದು, ಈ ಸರ್ಕಾರಿ ಶಾಲೆಗೆ ಅಗತ್ಯವಿರುವ ನೆರವು ನೀಡಲಾಗುವುದು ಹಾಗೂ ಇಲ್ಲಿನ ಮಕ್ಕಳ ಶಿಕ್ಷಣ ಮತ್ತು ಇನ್ನಿತರೆ ಸೌಲಭ್ಯಗಳನ್ನು ಒದಗಿಸುವುದಾಗಿ ಇದೇ ವೇಳೆ ನೀಡಿದರು.
ಬಳಿಕ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳಲ್ಲಿ ಅವರು ಪಾಲ್ಗೊಂಡರು.
ಶಾಲೆಯ ವ್ಯವಸ್ಥಾಪಕರಾದ ಸತೀಶ್, ಹೇಮಂತ್ ಗೌಡ, ಅಭಿ,ಸಂಜಯ್,ವೇಣು,ವಿದ್ಯಾ,ರಾಜು,ಹರೀಶ್ ಗೌಡ, ಚಂದ್ರು, ಮೂರ್ತಿ, ನವೀನ್ ಗೌಡ, ಮೋಸಿನ್, ಈರಣ್ಣ, ದಾಸೇಗೌಡ, ಸಿದ್ದಲಿಂಗು, ವಸಂತ, ನಾಗರಾಜು, ನಾಗೇಶ್, ಪುನೀತ್, ಬೇಬಿ, ಅಜ್ಗರ್, ಶಿವಶಂಕರ, ಚಂದ್ರು, ಲೋಕಿ ಚನ್ನಮಾದನಾಯಕ, ರಘು, ಶಿವು,ಸುರೇಶ್, ಮೃತ್ಯುಂಜಯ,
ಮಹೇಶ್, ಮಂಜುನಾಥ್, ಮಹದೇವು, ಶೇಖರ್, ಕುಮಾರ್, ಪುಟ್ಟರಾಜು, ಮಂಜು, ನಂಜುಂಡಸ್ವಾಮಿ, ಸದಾನಂದ್,ಲೋಕೇಶ್, ರಾಜೇಶ ಮತ್ತಿತರರು ಇದ್ದರು.
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…