ಜಿಲ್ಲೆಗಳು

ವಿದ್ಯಾರಣ್ಯರು ವಿಭೂತಿ ಪುರುಷರು: ಸಿ.ಪಿ.ಕೃಷ್ಣಕುಮಾರ್

ಮೈಸೂರು: ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ಕಾರಣಕರ್ತರಾದ ವಿದ್ಯಾರಣ್ಯರು ಆದರ್ಶಪ್ರಾಯರು. ಅವರು ವಿಭೂತಿ ಪುರುಷರು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಬಣ್ಣಿಸಿದರು.
ಹಿಮಾಲಯ ಪ್ರತಿಷ್ಠಾನವು ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರಣ್ಯರ ವ್ಯಕ್ತಿತ್ವ ಲೋಕೋತ್ತರವಾದುದು. ಧ್ರುವ ನಕ್ಷತ್ರದಂತೆ ಬೆಳಗಿದವರು. ಅವರ ಆದರ್ಶವನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯ ಬ್ರಾಹ್ಮಣ ಮಹಾಸಭಾ ವಲಯ ಉಪಾಧ್ಯಕ್ಷ ಬಿ.ಆರ್.ನಟರಾಜ ಜೋಯಿಸ್ ಮಾತನಾಡಿ, ವಿದ್ಯಾರಣ್ಯರು ಒಳ್ಳೆಯ ನಾಡನ್ನು ಕಟ್ಟಿದ್ದಾರೆ. ನಾವು ಅದೇ ರೀತಿ ಉತ್ತಮ ಸಮಾಜವನ್ನು ಕಟ್ಟೋಣ, ಕೆಟ್ಟದ್ದನ್ನು ಮನೆಯಲ್ಲಿಯೇ ಬಿಡೋಣ ಎಂದು ಮನವಿ ,ಮಾಡಿದರು.
ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ಕೆ.ಗುರುಪಾದ ಹೆಗಡೆ(ವಿದ್ವತ್ತು), ಆರ್.ವೆಂಕಟೇಶ್(ಕಲೆ), ಡಾ.ಗೀತಾ ಅವಧಾನಿ(ವೈದ್ಯಕೀಯ), ವಸಂತ ವೆಂಕಟೇಶ್(ಮುಕ್ತಕ ಸಾಹಿತ್ಯ), ಕೆ.ಲಕ್ಷ್ಮೀ(ಸಾಹಿತ್ಯ), ಅಂಶಿ ಪ್ರಸನ್ನಕುಮಾರ್(ಪತ್ರಿಕಾರಂಗ), ಡಾ.ಪಿ.ಎನ್.ಗಣೇಶ್‌ಕುಮಾರ್(ಯೋಗ), ಕೆ.ದಶರಥ(ಸಮಾಜ ಸೇವೆ) ಹಾಗೂ ಚಂದನ್‌ಗೌಡ(ಮಣ್ಣಿನ ಸೇವೆ) ಅವರಿಗೆ ‘ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಅರ್ಕಧಾಮದ ಸಂಸ್ಥಾಪಕ ಶ್ರೀನಿವಾಸ ಅರ್ಕ ಅವರು ಕಮಲಾ ರಾಜೇಶ್ ಅವರ ‘ಶ್ರೀನಿವಾಸ ಕಲ್ಯಾಣ’ ಕೃತಿ ಬಿಡುಗಡೆ ಮಾಡಿದರು. ಕೃತಿ ಕುರಿತು ರಾಜ್ಯ ಮುಕ್ತಕ ಕವಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಎಂ.ಮುತ್ತುಸ್ವಾಮಿ ಮಾತನಾಡಿದರು. ಸಮಾಜ ಸೇವಕ ಕೆ.ರಘುರಾಂ, ವಾಣಿ ವಿಲಾಸ ನೀರು ಸರಬರಾಜು ಕಾರ್ಯಗಾರದ ಕಾರ್ಯಪಾಲಕ ಇಂಜಿನಿಯರ್ ಡಿ. ಅಶ್ವಿನ್, ಕೆಎಸ್‌ಆರ್‌ಟಿಸಿ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಟಿ.ಬಸವರಾಜು, ಉದ್ಯಮಿ ಎಂ.ಆರ್.ರಾಹುಲ್ ಹಾಜರಿದ್ದರು. ಹಿವಾಲಯ ಪ್ರತಿಷ್ಠಾನದ ಅಧ್ಯಕ್ಷ ಎನ್.ಅನಂತ ಸ್ವಾಗತಿಸಿದರು. ಕಾರ್ಯದರ್ಶಿ ಉಮಾಶಂಕರ್ ಅಯ್ಯು ನಿರೂಪಿಸಿದರು. ಉಪಾಧ್ಯಕ್ಷ ಬಿ. ಉಮೇಶ್ ಮೊದಲಾದವರು ಇದ್ದರು. ತನಿಷಾ, ತ್ರಿಶಾಂಕ್ ಪ್ರಾರ್ಥಿಸಿದರು.

andolanait

Recent Posts

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್ ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ  ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ…

2 hours ago

‘ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳಲ್ಲಿ ರಂಗಶಿಕ್ಷಣ ನೀಡಿ’

ಗಿರೀಶ್ ಹುಣಸೂರು ಕೆಪಿಎಸ್, ಪಿಎಂಶ್ರೀ ಶಾಲೆಗಳಲ್ಲಿ ರಂಗಶಿಕ್ಷಕರ ನೇಮಕಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮೈಸೂರು: ಇಂದಿನ ಮಕ್ಕಳಲ್ಲಿ…

2 hours ago

1000 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣಕ್ಕೆ ಎಂಡಿಎ ಪ್ಲಾನ್!

ಕೆ.ಬಿ.ರಮೇಶನಾಯಕ ಮೈಸೂರು: ಹಲವು ಅವ್ಯವಹಾರಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿ ಯಾಗಿದ್ದ ಹಿಂದಿನ ಮುಡಾ, ಎಂಡಿಎ ಆಗಿ ಪರಿವರ್ತನೆಯಾದ…

2 hours ago

ಮಾನವತೆಯ ಸಂದೇಶ ಸಾರಿದ ಯತೀಂದ್ರ

ಡಾ.ಎಸ್‌. ಕೃಷ್ಣಪ್ಪ ಕಿತ್ತೂರು  ಇಂದು ಕೈವಾರ ತಾತಯ್ಯ ಅವರ ಜಯಂತಿ ‘ಉತ್ತಮ ಕುಲವೆಂದು ಹೇಳುವ ಮಾತು ಯುಕ್ತವಲ್ಲಣ್ಣ’... ೧೮ನೇ ಶತಮಾ…

2 hours ago

ಪ್ರಮುಖ ತಂತ್ರಜ್ಞಾನ ಸ್ಟಾರ್ಟ್ ಅಪ್‌ಗಳ ಹೋರಾಟ

ವಿಶ್ವಪ್ರಸಾದ್ ಆಳ್ವ ಒಂದೆರಡು ವರ್ಷಗಳ ಹಿಂದೆ ದೇಶದ ಹಣಕಾಸು ಸಚಿವರು ಮೂಲ ತಂತ್ರಜ್ಞಾನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್…

2 hours ago

ಇರಾನ್ ಸಂಘರ್ಷದ ಪೂರ್ವಾಪರ

ಪ್ರೊ.ಪ್ರೇಮ ಶೇಖರ ಒಂದೂವರೆ ತಿಂಗಳಿನಿಂದ ಜಗತ್ತು ಆತಂಕದಿಂದ ಎದುರು ನೋಡುತ್ತಿದ್ದಂತಹ ಯುದ್ಧ ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾಗಿದೆ. ಜನವರಿ ಮೊದಲ ಭಾಗದಲ್ಲಿ…

2 hours ago