ಜಿಲ್ಲೆಗಳು

ವಿದ್ಯಾರಣ್ಯರು ವಿಭೂತಿ ಪುರುಷರು: ಸಿ.ಪಿ.ಕೃಷ್ಣಕುಮಾರ್

ಮೈಸೂರು: ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ಕಾರಣಕರ್ತರಾದ ವಿದ್ಯಾರಣ್ಯರು ಆದರ್ಶಪ್ರಾಯರು. ಅವರು ವಿಭೂತಿ ಪುರುಷರು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಬಣ್ಣಿಸಿದರು.
ಹಿಮಾಲಯ ಪ್ರತಿಷ್ಠಾನವು ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರಣ್ಯರ ವ್ಯಕ್ತಿತ್ವ ಲೋಕೋತ್ತರವಾದುದು. ಧ್ರುವ ನಕ್ಷತ್ರದಂತೆ ಬೆಳಗಿದವರು. ಅವರ ಆದರ್ಶವನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯ ಬ್ರಾಹ್ಮಣ ಮಹಾಸಭಾ ವಲಯ ಉಪಾಧ್ಯಕ್ಷ ಬಿ.ಆರ್.ನಟರಾಜ ಜೋಯಿಸ್ ಮಾತನಾಡಿ, ವಿದ್ಯಾರಣ್ಯರು ಒಳ್ಳೆಯ ನಾಡನ್ನು ಕಟ್ಟಿದ್ದಾರೆ. ನಾವು ಅದೇ ರೀತಿ ಉತ್ತಮ ಸಮಾಜವನ್ನು ಕಟ್ಟೋಣ, ಕೆಟ್ಟದ್ದನ್ನು ಮನೆಯಲ್ಲಿಯೇ ಬಿಡೋಣ ಎಂದು ಮನವಿ ,ಮಾಡಿದರು.
ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ಕೆ.ಗುರುಪಾದ ಹೆಗಡೆ(ವಿದ್ವತ್ತು), ಆರ್.ವೆಂಕಟೇಶ್(ಕಲೆ), ಡಾ.ಗೀತಾ ಅವಧಾನಿ(ವೈದ್ಯಕೀಯ), ವಸಂತ ವೆಂಕಟೇಶ್(ಮುಕ್ತಕ ಸಾಹಿತ್ಯ), ಕೆ.ಲಕ್ಷ್ಮೀ(ಸಾಹಿತ್ಯ), ಅಂಶಿ ಪ್ರಸನ್ನಕುಮಾರ್(ಪತ್ರಿಕಾರಂಗ), ಡಾ.ಪಿ.ಎನ್.ಗಣೇಶ್‌ಕುಮಾರ್(ಯೋಗ), ಕೆ.ದಶರಥ(ಸಮಾಜ ಸೇವೆ) ಹಾಗೂ ಚಂದನ್‌ಗೌಡ(ಮಣ್ಣಿನ ಸೇವೆ) ಅವರಿಗೆ ‘ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಅರ್ಕಧಾಮದ ಸಂಸ್ಥಾಪಕ ಶ್ರೀನಿವಾಸ ಅರ್ಕ ಅವರು ಕಮಲಾ ರಾಜೇಶ್ ಅವರ ‘ಶ್ರೀನಿವಾಸ ಕಲ್ಯಾಣ’ ಕೃತಿ ಬಿಡುಗಡೆ ಮಾಡಿದರು. ಕೃತಿ ಕುರಿತು ರಾಜ್ಯ ಮುಕ್ತಕ ಕವಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಎಂ.ಮುತ್ತುಸ್ವಾಮಿ ಮಾತನಾಡಿದರು. ಸಮಾಜ ಸೇವಕ ಕೆ.ರಘುರಾಂ, ವಾಣಿ ವಿಲಾಸ ನೀರು ಸರಬರಾಜು ಕಾರ್ಯಗಾರದ ಕಾರ್ಯಪಾಲಕ ಇಂಜಿನಿಯರ್ ಡಿ. ಅಶ್ವಿನ್, ಕೆಎಸ್‌ಆರ್‌ಟಿಸಿ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಟಿ.ಬಸವರಾಜು, ಉದ್ಯಮಿ ಎಂ.ಆರ್.ರಾಹುಲ್ ಹಾಜರಿದ್ದರು. ಹಿವಾಲಯ ಪ್ರತಿಷ್ಠಾನದ ಅಧ್ಯಕ್ಷ ಎನ್.ಅನಂತ ಸ್ವಾಗತಿಸಿದರು. ಕಾರ್ಯದರ್ಶಿ ಉಮಾಶಂಕರ್ ಅಯ್ಯು ನಿರೂಪಿಸಿದರು. ಉಪಾಧ್ಯಕ್ಷ ಬಿ. ಉಮೇಶ್ ಮೊದಲಾದವರು ಇದ್ದರು. ತನಿಷಾ, ತ್ರಿಶಾಂಕ್ ಪ್ರಾರ್ಥಿಸಿದರು.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

1 hour ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago