ಜಿಲ್ಲೆಗಳು

ವಿದ್ಯಾರಣ್ಯರು ವಿಭೂತಿ ಪುರುಷರು: ಸಿ.ಪಿ.ಕೃಷ್ಣಕುಮಾರ್

ಮೈಸೂರು: ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ಕಾರಣಕರ್ತರಾದ ವಿದ್ಯಾರಣ್ಯರು ಆದರ್ಶಪ್ರಾಯರು. ಅವರು ವಿಭೂತಿ ಪುರುಷರು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಬಣ್ಣಿಸಿದರು.
ಹಿಮಾಲಯ ಪ್ರತಿಷ್ಠಾನವು ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರಣ್ಯರ ವ್ಯಕ್ತಿತ್ವ ಲೋಕೋತ್ತರವಾದುದು. ಧ್ರುವ ನಕ್ಷತ್ರದಂತೆ ಬೆಳಗಿದವರು. ಅವರ ಆದರ್ಶವನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯ ಬ್ರಾಹ್ಮಣ ಮಹಾಸಭಾ ವಲಯ ಉಪಾಧ್ಯಕ್ಷ ಬಿ.ಆರ್.ನಟರಾಜ ಜೋಯಿಸ್ ಮಾತನಾಡಿ, ವಿದ್ಯಾರಣ್ಯರು ಒಳ್ಳೆಯ ನಾಡನ್ನು ಕಟ್ಟಿದ್ದಾರೆ. ನಾವು ಅದೇ ರೀತಿ ಉತ್ತಮ ಸಮಾಜವನ್ನು ಕಟ್ಟೋಣ, ಕೆಟ್ಟದ್ದನ್ನು ಮನೆಯಲ್ಲಿಯೇ ಬಿಡೋಣ ಎಂದು ಮನವಿ ,ಮಾಡಿದರು.
ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ಕೆ.ಗುರುಪಾದ ಹೆಗಡೆ(ವಿದ್ವತ್ತು), ಆರ್.ವೆಂಕಟೇಶ್(ಕಲೆ), ಡಾ.ಗೀತಾ ಅವಧಾನಿ(ವೈದ್ಯಕೀಯ), ವಸಂತ ವೆಂಕಟೇಶ್(ಮುಕ್ತಕ ಸಾಹಿತ್ಯ), ಕೆ.ಲಕ್ಷ್ಮೀ(ಸಾಹಿತ್ಯ), ಅಂಶಿ ಪ್ರಸನ್ನಕುಮಾರ್(ಪತ್ರಿಕಾರಂಗ), ಡಾ.ಪಿ.ಎನ್.ಗಣೇಶ್‌ಕುಮಾರ್(ಯೋಗ), ಕೆ.ದಶರಥ(ಸಮಾಜ ಸೇವೆ) ಹಾಗೂ ಚಂದನ್‌ಗೌಡ(ಮಣ್ಣಿನ ಸೇವೆ) ಅವರಿಗೆ ‘ಆಚಾರ್ಯ ಶ್ರೀ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಅರ್ಕಧಾಮದ ಸಂಸ್ಥಾಪಕ ಶ್ರೀನಿವಾಸ ಅರ್ಕ ಅವರು ಕಮಲಾ ರಾಜೇಶ್ ಅವರ ‘ಶ್ರೀನಿವಾಸ ಕಲ್ಯಾಣ’ ಕೃತಿ ಬಿಡುಗಡೆ ಮಾಡಿದರು. ಕೃತಿ ಕುರಿತು ರಾಜ್ಯ ಮುಕ್ತಕ ಕವಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಎಂ.ಮುತ್ತುಸ್ವಾಮಿ ಮಾತನಾಡಿದರು. ಸಮಾಜ ಸೇವಕ ಕೆ.ರಘುರಾಂ, ವಾಣಿ ವಿಲಾಸ ನೀರು ಸರಬರಾಜು ಕಾರ್ಯಗಾರದ ಕಾರ್ಯಪಾಲಕ ಇಂಜಿನಿಯರ್ ಡಿ. ಅಶ್ವಿನ್, ಕೆಎಸ್‌ಆರ್‌ಟಿಸಿ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಟಿ.ಬಸವರಾಜು, ಉದ್ಯಮಿ ಎಂ.ಆರ್.ರಾಹುಲ್ ಹಾಜರಿದ್ದರು. ಹಿವಾಲಯ ಪ್ರತಿಷ್ಠಾನದ ಅಧ್ಯಕ್ಷ ಎನ್.ಅನಂತ ಸ್ವಾಗತಿಸಿದರು. ಕಾರ್ಯದರ್ಶಿ ಉಮಾಶಂಕರ್ ಅಯ್ಯು ನಿರೂಪಿಸಿದರು. ಉಪಾಧ್ಯಕ್ಷ ಬಿ. ಉಮೇಶ್ ಮೊದಲಾದವರು ಇದ್ದರು. ತನಿಷಾ, ತ್ರಿಶಾಂಕ್ ಪ್ರಾರ್ಥಿಸಿದರು.

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago