ಮಡಿಕೇರಿ: ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬೆಟ್ಟಗೇರಿಯಲ್ಲಿ ನಡೆಯಲಿರುವ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಲಾಗಿದ್ದು, ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ ಎಂದು ಸಂಚಿಕೆ ಸಮಿತಿ ಸಂಪಾದಕ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ.
ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಸಾಹಿತಿಗಳು, ಲೇಖಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಕತೆ, ಕವನ, ಚುಟುಕ, ಒಗಟು, ಗಾದೆ, ನಾಟಿ ಔಷಧಿ, ವೈಚಾರಿಕ ಲೇಖನ, ನಾಡಿನ ಐತಿಹಾಸಿಕ ಹಿನ್ನೆಲೆಗಳ ಬಗ್ಗೆ ಬರೆದು ಜ.25ರೊಳಗೆ ಮೊ.ಸಂ. 8672110948, 9535615759 ವ್ಯಾಟ್ಸಾಪ್ ವಾಡಬಹುದಾಗಿದೆ.





