ಜಿಲ್ಲೆಗಳು

ಕ್ಯಾಮೆರಾ ‘ಕಣ್ಣು’ಗಳಿಲ್ಲದ ದೇವಾಲಯಗಳೇ ಕಳ್ಳರ ‘ಗುರಿ

ಸೂಕ್ತ ಸಾಕ್ಷ್ಯಗಳು ಸಿಗದೇ ಪೊಲೀಸರ ತನಿಖಾ ಕಾರ್ಯಕ್ಕೆ ಸವಾಲಾಗಿರುವ ಪ್ರಕರಣಗಳು
ಚಿರಂಜೀವಿ ಸಿ.ಹುಲ್ಲಹಳ್ಳಿ
ಮೈಸೂರು: ಸೂಕ್ತ ರೀತಿಯ ರಕ್ಷಣಾ ವ್ಯವಸ್ಥೆ ಹೊಂದಿಲ್ಲದ ದೇವಾಲಯಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುವ ಖದೀಮರು ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರೂ, ಸಿಗುವ ಸಾಕ್ಷ್ಯಗಳ ಆಧಾರದಲ್ಲೇ ತನಿಖೆ ನಡೆಸಿ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗುತ್ತಿದ್ದಾರೆ.
ಕಳೆದ ಐದು ವರ್ಷಗಳಿಂದ ಜಿಲ್ಲೆಯ ದೇವಸ್ಥಾನದಲ್ಲಿ ನಡೆದಿರುವ ಕಳವು ಪ್ರಕರಣಗಳಲ್ಲಿ ಲಕ್ಷಾಂತರ ರೂ. ನಗದು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದು, ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸ್ ಇಲಾಖೆ ಸಾಹಸ ಪಟ್ಟು ಕೆಲವು ಕಳ್ಳರಿಗೆ ಕಂಬಿ ಎಣಿಸುವಂತೆ ಮಾಡಿದರೆ, ಮತ್ತೆ ಕೆಲವರು ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಸಾರ್ವಜನಿಕರು ಮತ್ತು ದೇವಾಲಯದ ಆಡಳಿತ ಮಂಡಳಿಯ ಆತಂಕಕ್ಕೆ ಕಾರಣವಾಗಿದ್ದಾರೆ.
ಗ್ರಾಮೀಣ ಮತ್ತು ಪಟ್ಟಣಗಳಲ್ಲಿ ಪುರಾತನ ಮತ್ತು ಹೆಚ್ಚಿನ ಆರ್ಥಿಕ ವಹಿವಾಟು ಹೊಂದಿರುವ ದೇವಾಲಯಗಳು, ದೇವರ ವಿಗ್ರಹದ ಮೇಲೆ ಹೆಚ್ಚಿನ ಚಿನ್ನಾಭರಣ ಹೊಂದಿರುವ ದೇವಸ್ಥಾನಗಳನ್ನು ಗುರಿಯಾಗಿಸಿ ಮಾಡುವ ಕಳ್ಳರು ಮೂರ್ನಾಲ್ಕು ದಿನ ಹೊಂಚು ಹಾಕಿ ತಮ್ಮ ಕೆಲಸವನ್ನು ಸಾಧಿಸಿಕೊಳ್ಳುತ್ತಿದ್ದಾರೆ. ಇಂತಹ ಪ್ರಕರಣ ನಡೆದಿರುವ ಬಹುತೇಕ ದೇವಾಲಯಗಳಲ್ಲಿ ಸಿಸಿ ಕ್ಯಾಮೆರಾಗಳು ಇಲ್ಲದಿರುವುದು ಕಳ್ಳರಿಗೆ ವರದಾನವಾಗಿದೆ. ಕೆಲವೊಂದು ಕಡೆ ಕ್ಯಾಮೆರಾಗಳಿದ್ದರೂ ಕಳ್ಳರು ಬುದ್ಧಿವಂತಿಕೆಯಿಂದ ಕಳವು ಮಾಡಿದ್ದಾರೆ.


೨೫ ಪ್ರಕರಣ ಪತ್ತೆ ಹಚ್ಚಿರುವ ಪೊಲೀಸರು
ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ೯೦ ದೇವಾಲಯಗಳಲ್ಲಿ ಚಿನ್ನಾಭರಣ, ನಗದು, ಹುಂಡಿ ಹಣವನ್ನು ಖದೀಮರು ದೋಚಿದ್ದರು. ಇದರಲ್ಲಿ ಪ್ರಮುಖ ಮತ್ತು ತೀರಾ ಗಂಭೀರವಾದ ೨೫ ಪ್ರಕರಣಗಳನ್ನು ಪೊಲೀಸರು ಭೇದಿಸುವ ಮೂಲಕ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆದಿರುವುದು ಅಂಕಿ-ಅಂಶಗಳು ಹೇಳುತ್ತಿವೆ.


ದೈವ ಭಕ್ತ ಕಳ್ಳರು!
ನಂಜನಗೂಡು ತಾಲ್ಲೂಕಿನ ಉಪ್ಪಿನಹಳ್ಳಿ ಗ್ರಾಮದ ದುರ್ಗಾಂಬ ದೇವಸ್ಥಾನದಲ್ಲಿ ದೇವರ ತಾಳಿಯನ್ನು ಕದ್ದು, ವಾಪಸ್ ತಂದಿಟ್ಟು ಜೊತೆಗೆ ೧೦೧ ರೂಪಾಯಿ ತಪ್ಪು ಕಾಣಿಕೆ ಇಟ್ಟು ಕಳ್ಳರು ತನ್ನ ದೈವ ಭಕ್ತಿಯನ್ನು ಮೆರೆದಿದ್ದಾರೆ. ದೇವರ ತಾಳಿ ಜತೆಗೆ ಅವರು ಹುಂಡಿಯಲ್ಲಿದ್ದ ಹಣವನ್ನು ಕದ್ದೊಯ್ದಿದ್ದರು.


ಸಿನಿಮಾ ಶೈಲಿಯಲ್ಲಿ ಕಳ್ಳರ ಸೆರೆ
ಈಚೆಗೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಪ್ರಸಿದ್ಧ ಮೂಗೂರು ತ್ರಿಪುರ ಸುಂದರಿ ದೇವಾಲಯದ ಕಳ್ಳತನ ಪ್ರಕರಣ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಿಶೇಷ ತಂಡ ಚಾಮರಾಜನಗರ ತಾಲ್ಲೂಕಿನ ಬಿಸಲವಾಡಿ ಗ್ರಾಮದಲ್ಲಿ ಸಿನಿಮಾ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ೫ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣವನ್ನು ಬೇಧಿಸಿದರು. ಈ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಆರೋಪಿಗಳು ಜಿಲ್ಲೆಗಳ ಹಲವು ದೇಗುಲ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಪತ್ತೆಯಾ ಗಿದ್ದು, ಪೊಲೀಸರ ಸಾಹಸದ ಬಗ್ಗೆ ಶ್ಲಾಘನೆ ಮಾತುಗಳು ವ್ಯಕ್ತವಾದವು.

 

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

11 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

12 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago