ಜಿಲ್ಲೆಗಳು

ಆರಂಭದಲ್ಲೇ ಮಕ್ಕಳಲ್ಲಿನ ಕ್ಯಾನ್ಸರ್ ಪತ್ತೆ ಹಚ್ಚಿದರೆ ಗುಣಪಡಿಸಬಹುದು: ಡಾ.ಶ್ರೀನಿವಾಸ್

ಮೈಸೂರು: ಮಕ್ಕಳು ಸೇರಿದಂತೆ ಎಲ್ಲ ವೋಂಮಾನದವರಿಗೂ ಕ್ಯಾನ್ಸರ್ ಕಾಣಿಸಿಕೊಳ್ಳುತ್ತದೆ, ಆದರೆ ಮಕ್ಕಳಲ್ಲಿ ಕ್ಯಾನ್ಸರ್ ಬರುವುದು ಅಪರೂಪವಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದು. ಪ್ರತಿ ವರ್ಷ ವಿಶ್ವದಾದ್ಯಂತ ಸುಮಾರು ೩ ಲಕ್ಷ ಮಕ್ಕಳಲ್ಲಿ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ ಎಂದು ಭಾರತ್ ಆಸ್ಪತ್ರೆ ಮತ್ತು ಆಂಕೋಲಾಜಿ ಸಂಸ್ಥೆಯ ಸಲಹೆಗಾರ, ವೈದ್ಯಕೀಯ ಆಂಕೋಲಾಜಿಸ್ಟ್ ಡಾ.ಕೆ.ಜಿ.ಶ್ರೀನಿವಾಸ್ ಹೇಳಿದರು.

ಭಾರತ್ ಆಸ್ಪತ್ರೆ ಮತ್ತು ಆಂಕೋಲಾಜಿ ಸಂಸ್ಥೆಯಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದಲ್ಲಿ ಮಾತ್ರ ಪ್ರತಿ ವರ್ಷ ೧೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ೫೦,೦೦೦ಕ್ಕೂ ಹೆಚ್ಚು ಬಾಲ್ಯದ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ ಎಂದು ಹೇಳಿದರು.

ಮಕ್ಕಳಲ್ಲೂ ೧೦ಕ್ಕೂ ಹೆಚ್ಚು ರೀತಿಯ ಕ್ಯಾನ್ಸರ್‌ಗಳು ಕಾಣಿಸಿಕೊಳ್ಳುತ್ತವೆ. ಇವುಗಳಲ್ಲಿ ತೀವ್ರವಾದ ಲ್ಯುಕೇಮಿಯಾ, ಬ್ರೈನ್ ಟ್ಯೂಮರ್, ಲಿಂಫೋಮಾ, ನ್ಯೂರೋಬ್ಲಾಸ್ಟೊಮಾ, ರೆಟಿನೋಬ್ಲಾಸ್ಟೊಮಾ ಮತ್ತು ಮೃದು ಅಂಗಾಂಶದ ಸಾರ್ಕೋಮಾಗಳು ಸೇರಿವೆ. ಅವುಗಳಲ್ಲಿ ರಕ್ತದ ಕ್ಯಾನ್ಸರ್ ಅಥವಾ ಲ್ಯುಕೇಮಿಯಾವು ೧ರಿಂದ ೧೦ ವರ್ಷ ವಯಸ್ಸಿನ ಮಕ್ಕಳಲ್ಲಿ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ, ಇದಕ್ಕೆ ಆರಂಭಿಕ ಹಂತದ ಚಿಕಿತ್ಸೆಯ ಅಗತ್ಯವಿದೆ. ಮೊದಲೇ ಕಾಯಿಲೆ ಪತ್ತೆ ಹಚ್ಚಿ ವಿಶೇಷ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದಾಗಿದೆ. ಮಕ್ಕಳಲ್ಲಿನ ಶೇ.೭೦ರಷ್ಟು ಕ್ಯಾನ್ಸರ್ ಪ್ರಕರಣಗಳನ್ನು ಗುಣಪಡಿಸಬಹುದು ಎಂದು ಹೇಳಿದರು.
ಒಂದು ತಿಂಗಳಿಗಿಂತ ಹೆಚ್ಚು ಕಾಲ ಜ್ವರ ಮತ್ತು ಮೂಳೆಗಳಲ್ಲಿ ನೋವು ಮತ್ತು ಸಾಮಾನ್ಯ ವೈರಲ್ ಕಾಯಿಲೆ, ದೌರ್ಬಲ್ಯ, ರಕ್ತಸ್ರಾವ, ಅಸಾಮಾನ್ಯ ಗಡ್ಡೆ, ಊತ, ದೇಹದ ಒಂದು ಭಾಗದಲ್ಲಿ ನೋವು, ಆಗಾಗ್ಗೆ ತಲೆನೋವು, ವಾಂತಿ ಮಕ್ಕಳು ನಿರಂತರವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದರೆ ಅದು ಕ್ಯಾನ್ಸರ್‌ನ ಲಕ್ಷಣವಾಗಿದೆ, ಇದನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಿ ಚಿಕಿತ್ಸೆ ನೀಡುವುದು ಅಗತ್ಯವಿರುತ್ತದೆ ಎಂದು ಹೇಳಿದರು.

andolanait

Recent Posts

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

2 mins ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

18 mins ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

49 mins ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

1 hour ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

1 hour ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

2 hours ago