ಜಿಲ್ಲೆಗಳು

ಆರಂಭದಲ್ಲೇ ಮಕ್ಕಳಲ್ಲಿನ ಕ್ಯಾನ್ಸರ್ ಪತ್ತೆ ಹಚ್ಚಿದರೆ ಗುಣಪಡಿಸಬಹುದು: ಡಾ.ಶ್ರೀನಿವಾಸ್

ಮೈಸೂರು: ಮಕ್ಕಳು ಸೇರಿದಂತೆ ಎಲ್ಲ ವೋಂಮಾನದವರಿಗೂ ಕ್ಯಾನ್ಸರ್ ಕಾಣಿಸಿಕೊಳ್ಳುತ್ತದೆ, ಆದರೆ ಮಕ್ಕಳಲ್ಲಿ ಕ್ಯಾನ್ಸರ್ ಬರುವುದು ಅಪರೂಪವಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದು. ಪ್ರತಿ ವರ್ಷ ವಿಶ್ವದಾದ್ಯಂತ ಸುಮಾರು ೩ ಲಕ್ಷ ಮಕ್ಕಳಲ್ಲಿ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ ಎಂದು ಭಾರತ್ ಆಸ್ಪತ್ರೆ ಮತ್ತು ಆಂಕೋಲಾಜಿ ಸಂಸ್ಥೆಯ ಸಲಹೆಗಾರ, ವೈದ್ಯಕೀಯ ಆಂಕೋಲಾಜಿಸ್ಟ್ ಡಾ.ಕೆ.ಜಿ.ಶ್ರೀನಿವಾಸ್ ಹೇಳಿದರು.

ಭಾರತ್ ಆಸ್ಪತ್ರೆ ಮತ್ತು ಆಂಕೋಲಾಜಿ ಸಂಸ್ಥೆಯಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದಲ್ಲಿ ಮಾತ್ರ ಪ್ರತಿ ವರ್ಷ ೧೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ೫೦,೦೦೦ಕ್ಕೂ ಹೆಚ್ಚು ಬಾಲ್ಯದ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ ಎಂದು ಹೇಳಿದರು.

ಮಕ್ಕಳಲ್ಲೂ ೧೦ಕ್ಕೂ ಹೆಚ್ಚು ರೀತಿಯ ಕ್ಯಾನ್ಸರ್‌ಗಳು ಕಾಣಿಸಿಕೊಳ್ಳುತ್ತವೆ. ಇವುಗಳಲ್ಲಿ ತೀವ್ರವಾದ ಲ್ಯುಕೇಮಿಯಾ, ಬ್ರೈನ್ ಟ್ಯೂಮರ್, ಲಿಂಫೋಮಾ, ನ್ಯೂರೋಬ್ಲಾಸ್ಟೊಮಾ, ರೆಟಿನೋಬ್ಲಾಸ್ಟೊಮಾ ಮತ್ತು ಮೃದು ಅಂಗಾಂಶದ ಸಾರ್ಕೋಮಾಗಳು ಸೇರಿವೆ. ಅವುಗಳಲ್ಲಿ ರಕ್ತದ ಕ್ಯಾನ್ಸರ್ ಅಥವಾ ಲ್ಯುಕೇಮಿಯಾವು ೧ರಿಂದ ೧೦ ವರ್ಷ ವಯಸ್ಸಿನ ಮಕ್ಕಳಲ್ಲಿ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ, ಇದಕ್ಕೆ ಆರಂಭಿಕ ಹಂತದ ಚಿಕಿತ್ಸೆಯ ಅಗತ್ಯವಿದೆ. ಮೊದಲೇ ಕಾಯಿಲೆ ಪತ್ತೆ ಹಚ್ಚಿ ವಿಶೇಷ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದಾಗಿದೆ. ಮಕ್ಕಳಲ್ಲಿನ ಶೇ.೭೦ರಷ್ಟು ಕ್ಯಾನ್ಸರ್ ಪ್ರಕರಣಗಳನ್ನು ಗುಣಪಡಿಸಬಹುದು ಎಂದು ಹೇಳಿದರು.
ಒಂದು ತಿಂಗಳಿಗಿಂತ ಹೆಚ್ಚು ಕಾಲ ಜ್ವರ ಮತ್ತು ಮೂಳೆಗಳಲ್ಲಿ ನೋವು ಮತ್ತು ಸಾಮಾನ್ಯ ವೈರಲ್ ಕಾಯಿಲೆ, ದೌರ್ಬಲ್ಯ, ರಕ್ತಸ್ರಾವ, ಅಸಾಮಾನ್ಯ ಗಡ್ಡೆ, ಊತ, ದೇಹದ ಒಂದು ಭಾಗದಲ್ಲಿ ನೋವು, ಆಗಾಗ್ಗೆ ತಲೆನೋವು, ವಾಂತಿ ಮಕ್ಕಳು ನಿರಂತರವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದರೆ ಅದು ಕ್ಯಾನ್ಸರ್‌ನ ಲಕ್ಷಣವಾಗಿದೆ, ಇದನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಿ ಚಿಕಿತ್ಸೆ ನೀಡುವುದು ಅಗತ್ಯವಿರುತ್ತದೆ ಎಂದು ಹೇಳಿದರು.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

24 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

30 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

39 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago