ನಂಜನಗೂಡು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕಿನ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ವಿದ್ಯಾಪೀಠದ ಬಳಿ ಇಂದು ಸಂಜೆ ನಡೆದಿದೆ.
ಸಾವಿಗೀಡಾದವರನ್ನು ಚಾಮರಾಜನಗರ ತಾಲೂಕಿನ ಹೆಗ್ಗೊಟರ ಗ್ರಾಮದ ಮಹೇಶ್ ನಾಗಣ್ಣ (40 ವರ್ಷ), ಹಾಗೂ ಮಹದೇವ ನಾಗರಾಜು (50 ವರ್ಷ) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುವಾಗ ಡಿಕ್ಕಿಯಾದ ಕಾರು ಇಬ್ಬರ ಸಾವಿಗೆ ಕಾರಣರಾದ ಕಾರಿನ ಚಾಲಕ ಜಲಸಂಪನ್ಮೂಲ ಇಲಾಖೆ ಇಂಜಿನಿಯರ್ ನಟೇಶ್ ಅವರು ತಾವೇ ನಂಜನಗೂಡು ಠಾಣೆಗೆ ಶರಣಾಗಿದ್ದಾರೆ.
ನಂಜನಗೂಡಿನಲ್ಲಿ ಕೆಲಸ ಮುಗಿಸಿ ಊರು ಕಡೆ ಹೊರಟಿದ್ದ ಮಹೇಶ್ ಹಾಗೂ ಮಹದೇವ ಅವರ ಬೈಕಿಗೆ ಫಾರಂ ಹೌಸ್ ಗೆ ಹೋಗಿ ವಾಪಸ್ ಆಗುತ್ತಿದ್ದವರಿಗೆ ಕಾರು ನಂಜನಗೂಡು ಚಾಮರಾಜನಗರ ರಸ್ತೆಯಲ್ಲಿರುವ ವಿದ್ಯಾಪೀಠದ ಬಳಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಬೇರೆ ಬೇರೆ ಕಡೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಕಾರು ಕೂಡ ಮತ್ತೊಂದು ಕಡೆ ಹೋಗಿ ನಿಂತಿದೆ. ಸ್ಥಳಕ್ಕೆ ನಂಜನಗೂಡು ಪೊಲೀಸ್ ಅಧಿಕಾರಿಗಳಾದ ಲಕ್ಷ್ಮಿಕಾಂತ ತಳವಾರ್, ಯಾಸ್ಮಿನ್ ತಾಜ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ..
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…