ನಂಜನಗೂಡು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕಿನ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ವಿದ್ಯಾಪೀಠದ ಬಳಿ ಇಂದು ಸಂಜೆ ನಡೆದಿದೆ.
ಸಾವಿಗೀಡಾದವರನ್ನು ಚಾಮರಾಜನಗರ ತಾಲೂಕಿನ ಹೆಗ್ಗೊಟರ ಗ್ರಾಮದ ಮಹೇಶ್ ನಾಗಣ್ಣ (40 ವರ್ಷ), ಹಾಗೂ ಮಹದೇವ ನಾಗರಾಜು (50 ವರ್ಷ) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುವಾಗ ಡಿಕ್ಕಿಯಾದ ಕಾರು ಇಬ್ಬರ ಸಾವಿಗೆ ಕಾರಣರಾದ ಕಾರಿನ ಚಾಲಕ ಜಲಸಂಪನ್ಮೂಲ ಇಲಾಖೆ ಇಂಜಿನಿಯರ್ ನಟೇಶ್ ಅವರು ತಾವೇ ನಂಜನಗೂಡು ಠಾಣೆಗೆ ಶರಣಾಗಿದ್ದಾರೆ.
ನಂಜನಗೂಡಿನಲ್ಲಿ ಕೆಲಸ ಮುಗಿಸಿ ಊರು ಕಡೆ ಹೊರಟಿದ್ದ ಮಹೇಶ್ ಹಾಗೂ ಮಹದೇವ ಅವರ ಬೈಕಿಗೆ ಫಾರಂ ಹೌಸ್ ಗೆ ಹೋಗಿ ವಾಪಸ್ ಆಗುತ್ತಿದ್ದವರಿಗೆ ಕಾರು ನಂಜನಗೂಡು ಚಾಮರಾಜನಗರ ರಸ್ತೆಯಲ್ಲಿರುವ ವಿದ್ಯಾಪೀಠದ ಬಳಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಬೇರೆ ಬೇರೆ ಕಡೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಕಾರು ಕೂಡ ಮತ್ತೊಂದು ಕಡೆ ಹೋಗಿ ನಿಂತಿದೆ. ಸ್ಥಳಕ್ಕೆ ನಂಜನಗೂಡು ಪೊಲೀಸ್ ಅಧಿಕಾರಿಗಳಾದ ಲಕ್ಷ್ಮಿಕಾಂತ ತಳವಾರ್, ಯಾಸ್ಮಿನ್ ತಾಜ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ..
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…