ನಂಜನಗೂಡು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕಿನ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ವಿದ್ಯಾಪೀಠದ ಬಳಿ ಇಂದು ಸಂಜೆ ನಡೆದಿದೆ.
ಸಾವಿಗೀಡಾದವರನ್ನು ಚಾಮರಾಜನಗರ ತಾಲೂಕಿನ ಹೆಗ್ಗೊಟರ ಗ್ರಾಮದ ಮಹೇಶ್ ನಾಗಣ್ಣ (40 ವರ್ಷ), ಹಾಗೂ ಮಹದೇವ ನಾಗರಾಜು (50 ವರ್ಷ) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುವಾಗ ಡಿಕ್ಕಿಯಾದ ಕಾರು ಇಬ್ಬರ ಸಾವಿಗೆ ಕಾರಣರಾದ ಕಾರಿನ ಚಾಲಕ ಜಲಸಂಪನ್ಮೂಲ ಇಲಾಖೆ ಇಂಜಿನಿಯರ್ ನಟೇಶ್ ಅವರು ತಾವೇ ನಂಜನಗೂಡು ಠಾಣೆಗೆ ಶರಣಾಗಿದ್ದಾರೆ.
ನಂಜನಗೂಡಿನಲ್ಲಿ ಕೆಲಸ ಮುಗಿಸಿ ಊರು ಕಡೆ ಹೊರಟಿದ್ದ ಮಹೇಶ್ ಹಾಗೂ ಮಹದೇವ ಅವರ ಬೈಕಿಗೆ ಫಾರಂ ಹೌಸ್ ಗೆ ಹೋಗಿ ವಾಪಸ್ ಆಗುತ್ತಿದ್ದವರಿಗೆ ಕಾರು ನಂಜನಗೂಡು ಚಾಮರಾಜನಗರ ರಸ್ತೆಯಲ್ಲಿರುವ ವಿದ್ಯಾಪೀಠದ ಬಳಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಬೇರೆ ಬೇರೆ ಕಡೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಕಾರು ಕೂಡ ಮತ್ತೊಂದು ಕಡೆ ಹೋಗಿ ನಿಂತಿದೆ. ಸ್ಥಳಕ್ಕೆ ನಂಜನಗೂಡು ಪೊಲೀಸ್ ಅಧಿಕಾರಿಗಳಾದ ಲಕ್ಷ್ಮಿಕಾಂತ ತಳವಾರ್, ಯಾಸ್ಮಿನ್ ತಾಜ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ..
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…