ಮಲೆ ಮಹದೇಶ್ವರ ಬೆಟ್ಟದಿಂದ ಹಿಂತಿರುಗುವ ವೇಳೆ ದುರ್ಘಟನೆ
ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ.
ಮೈಸೂರು ತಾಲೂಕು ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಮೃತಪಟ್ಟ ಮಗು. ಮಂಜು, ಸಾಕಮ್ಮ, ಕಿರಣ್, ಚಂದ್ರಮ್ಮ, ಸಂತೇಯಮ್ಮ ಹಾಗೂ ಚಾಲಕ ವೆಂಕಟೇಶ್ ಎಂಬವರೇ ಗಾಯಗೊಂಡವರು.
ಮಲೆ ಮಾದೇಶ್ವರ ಬೆಟ್ಟದಲ್ಲಿ ಪೂಜೆ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಲೂಕಿನ ಮಂಗಲ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಹೊಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹನೂರು ಪೊಲೀಸರು ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಸಮೀಪದ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.
ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…
ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…