ಜಿಲ್ಲೆಗಳು

ಒಡನಾಡಿಗೆ ಚಿತ್ರದುರ್ಗದ ಪೊಲೀಸರು ನುಗ್ಗಿದ ಪ್ರಕರಣ: ದೂರಿಗೆ ಪೊಲೀಸರ ಸ್ಪಂದನೆ ಇಲ್ಲ

ಮೈಸೂರು: ಮಕ್ಕಳು ಸುರಕ್ಷಿತವಾಗಿರುವ ಜಾಗದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿರುವ ಚಿತ್ರದುರ್ಗ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನಗರ ಪೊಲೀಸ ಆಯುಕ್ತರಿಗೆ ದೂರು ನೀಡಿದರೂ, ಇನ್ನು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ಹೇಳಿದ್ದಾರೆ.

ನ.೩೦ರಂದು ಒಡನಾಡಿ ಸೇವಾ ಸಂಸ್ಥೆಯ ಮಡಿಲು ಪುರ್ನವಸತಿ ಕೇಂದ್ರಕ್ಕೆ ಕಾನೂನು ಬಾಹಿರವಾಗಿ ಮಫ್ತಿಯಲ್ಲಿ ನುಗ್ಗಿರುವ ೧೦ ಮಂದಿ ಚಿತ್ರದುರ್ಗದ ಪೊಲೀಸರು ಸಂಸ್ಥೆಯೊಳಗೆ ಹುಡುಕಾಟ ನಡೆಸಿದ್ದರು. ಈ ಸಂಬಂಧ ಅವರ ಮೇಲೆ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ಕಳುಹಿಸಲಾಗಿತ್ತು. ಇದಕ್ಕೆ, ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಬುಧವಾರ ಹೀಗೆ ಮಾಡಿದ ಚಿತ್ರದುರ್ಗ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ನೀಡಿದ ದೂರನ್ನು ಪರಿಗಣಿಸಿ, ಎಫ್‌ಐಆರ್ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಠಾಣೆಗೆ ತಿಳಿಸಬೇಕೆಂದು ಕೋರಲಾಗಿದೆ. ಇದನ್ನು ಪರಿಗಣಿಸದೆ ಇದ್ದರೆ, ನಾವೇ ಕೋರ್ಟ್‌ನಲ್ಲಿ ಪಿಸಿಆರ್ ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ‘ ಯಾವುದೇ ಪ್ರಕರಣದ ಎಫ್‌ಐಆರ್ ಮಾಡಬೇಕಾದರೂ, ಕಾನೂನು ವಿಧಾನಗಳು ಇರುತ್ತವೆ. ಹಾಗಾಗಿ, ಸೂಕ್ತ ರೀತಿಯಲ್ಲಿ ವಿಚಾರಣೆ ಮತ್ತು ಪರಿಶೀಲನೆ ನಡೆಸಿ, ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಠಾಣೆಗೆ ನಿರ್ದೇಶನ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago