ಜಿಲ್ಲೆಗಳು

ಜಾತಿ ವ್ಯವಸ್ಥೆ ಹೋದರಷ್ಟೆ ಪ್ರಬುದ್ಧ ಭಾರತ ನಿರ್ಮಾಣ : ಹ ರಾ ಮಹೇಶ್

ಹನೂರು: ಜಾತಿ, ಬಡತನ ವ್ಯವಸ್ಥೆ ಹೋಗಲಾರದೆ ಪ್ರಭುದ್ಧ ಭಾರತ ನಿರ್ಮಾಣವಾಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಬೌದ್ಧ ಸಮಾಜದ ಅಧ್ಯಕ್ಷರಾದ ಹ.ರಾ.ಮಹೇಶ್ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಐದನೇ ಜಾಗೃತಿ ಶಿಬಿರದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿಗೂ ಜಾತಿ ಅಸಮಾನತೆ ತಾಂಡವಾಡುತ್ತಿದೆ. ಅದನ್ನು ತೊಲಗಿಸಲು ಬುದ್ಧ, ಬಾಬಾಸಾಹೇಬ್ ಅಂಬೇಡ್ಕರ್ ಅವರು ಉತ್ತಮ ಸಾಮಾಜಿಕ ರಾಜಕೀಯ ಶೈಕ್ಷಣಿಕ ಬಿತ್ತನೆ ಬೀಜವನ್ನು ನೀಡಿದ್ದಾರೆ. ಆದರೆ ಹದವಾದ ಭೂಮಿ ಆಗಿರಬೇಕಾದ ಸಮುದಾಯದ ಕೆಲವು ಜನತೆ ದೇವರು ದಿಂಡಿರು ಎಂಬ ಮೌಡ್ಯದ ಜೊತೆಗೆ ದುಶ್ಚಟಗಳ ದಾಸಕ್ಕೆ ಬಲಿಯಾಗಿದ್ದಾರೆ. ಮೌಡ್ಯವನ್ನು ತಮ್ಮ ಮನೆಯಿಂದಲೇ ಹೋಗಲಾಡಿಸಬೇಕು ಅದು ಬಿಟ್ಟು ಎಲ್ಲರೂ ಬದಲಾಗುವುದಿಲ್ಲ ಎನ್ನುವುದು ಸರಿಯಲ್ಲ. ಸಮುದಾಯದ ಜನತೆ ಆರ್ಥಿಕವಾಗಿ ಶೈಕ್ಷಣಿಕವಾಗಿ ರಾಜಕೀಯವಾಗಿ ಸಾಮಾಜಿಕವಾಗಿ ಜಾಗೃತರಾಗಬೇಕೆಂದು ತಿಳಿಸಿದರು.

ಡಿಸಿಪಿ ಸಿದ್ದರಾಜು ಅವರು ಮಾತನಾಡಿ, ಸಂವಿಧಾನ ಹೆಚ್ಚಳ ಮಾಡುವುದಕ್ಕೆ ಡಾ.ಬಿ. ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಕೆಲವರು ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಪ್ರಸ್ತುತ ದೇಶದಲ್ಲಿ ಕೋಟಿ ಕೋಟಿ ಖರ್ಚು ಮಾಡಿ ದೇಶವನ್ನು ಪಡೆದು ಕೊಳ್ಳೆ ಹೊಡೆಯುವ ವ್ಯವಸ್ಥೆ ನಿರ್ಮಾಣವಾಗಿದೆ. ಒಂದು ಎಂ. ಪಿ. ಸ್ಥಾನದಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರ ಅಧಿಕಾರ ಕಳೆದುಕೊಳ್ಳಬೇಕಾಯಿತು. ಒಂದು ಮತದ ಅಂತರದಿಂದ ಆರ್. ಧ್ರುವನಾರಾಯಣ್ ಸಂಸತ್ತಿಗೆ ಪ್ರವೇಶ ಮಾಡಿದರು. ಹಾಗಾಗಿ ಜನತೆ ಮತದಾನದ ಬಗ್ಗೆ ಎಚ್ಚರ ವಹಿಸಬೇಕು ಎಂದರು.
ಉಪಾಸಕರಾದ ಅರವಿಂದ್ ರಾಜ್ ಬೌದ್ಧ್ ಮಾತನಾಡಿ, ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ ಸ್ವಾಭಿಮಾನವನ್ನು ದೊಡ್ಡದು. ಅವರ ಮಗ ರಾಜರತ್ನ ತೀರಿಕೊಂಡಾಗ ಮಗನ ಶವಕ್ಕೆ ಹೊದ್ದಿಸಲು ಬಟ್ಟೆ ಇರದಂತಹ ಪರಿಸ್ಥಿತಿಯಲ್ಲಿದ್ದರೂ ಸ್ವಾಭಿಮಾನವನ್ನು ಬಿಟ್ಟುಕೊಟ್ಟಿರಲಿಲ್ಲ. ಹುಟ್ಟಿನ ಆಧಾರದ ಮೇಲೆ ಜಾತಿಯನ್ನು ನಿರ್ಧರಿಸಬಾರದು. ನಡತೆ ಆಧಾರದ ಮೇಲೆ ಗುರುತಿಸಬೇಕು. ಅಸ್ಪೃಶ್ಯರು ಎನಿಸಿಕೊಂಡ ಇಂದಿನ ಜನ ಹಿಂದೆ ಬೌದ್ಧರಾಗಿದ್ದರು ಎಂದರು.
ನಿವೃತ್ತ ಮುಖ್ಯ ಶಿಕ್ಷಕಿ ನಾಗಮಂಗಲದ ಚೂಡಾಮಣಿ, ಲಕ್ಷ್ಮಣ್ ಬಕ್ಕಾಯಿ, ದೊಡ್ಡಿಂದವಾಡಿ ಸಿದ್ದರಾಜು, ಶಿಕ್ಷಕಿ ಶಿವಕುಮಾರಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆ ಮಾಡಿದ ಬಂತೆ ಸುಗತಪಾಲರು ಧಮ್ಮ ವಂದನೆ, ಪಂಚಶೀಲ ಬೋಧಿಸಿದರು. ಚೌಡೇಶ್ ಅವರು ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಮುಕ್ತ ಸಂವಾದ ವೇದಿಕೆಯಿಂದ ಹನೂರು ಶೋಭಾ ಎಚ್. ಎಂ.ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ. ಪಂ.ಸದಸ್ಯ ಸಂಪತ್ ಕುಮಾರ್, ಗೌತಮ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವೀಂದ್ರ, ಗೃಹರಕ್ಷಕ ಸಿಬ್ಬಂದಿ ರಮೇಶ್, ಮಾರ್ಟಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ರಾಮಲಿಂಗಂ, ಸಂವಾದ ವೇದಿಕೆ ಸದಸ್ಯರಾದ ಶಿಕ್ಷಕ ಸುಭಾಷ್ ಚಂದ್ರ, ಮಹಾರಾಜ ವರ್ಮ, ವಿಜಯ ವರ್ಮ, ಪ್ರಭುಸ್ವಾಮಿ, ಹನೂರು ಪಟ್ಟಣದ ಯಜಮಾನರು, ಯುವಕರು, ಮುಖಂಡರುಗಳು ಸೇರಿದಂತೆ ವಿವಿಧ ಗ್ರಾಮಗಳ ಸಾರ್ವಜನಿಕರು ಪಾಲ್ಗೊಂಡಿದ್ದರು.

andolanait

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

2 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

3 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

3 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

4 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

4 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

5 hours ago