ಜಿಲ್ಲೆಗಳು

ಹನೂರು : ಸಿ.ಸಿ.ರಸ್ತೆ & ಚರಂಡಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ

ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮದಲ್ಲಿ ನೀರಾವರಿ ಇಲಾಖೆಯ ಎಸ್.ಇ.ಪಿ. ಯೋಜನೆಯ 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ನೀರಾವರಿ ಇಲಾಖೆ ಯ ಎಸ್.ಇ. ಪಿ.ಯೋಜನೆಯಡಿ ದೊಡ್ಡಿಂದುವಾಡಿ ಗ್ರಾಮದಲ್ಲಿ 50 ಲಕ್ಷ ರೂ.ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿ, ಹಾಗೂ ಮಣಗಳ್ಳಿ ಗ್ರಾಮದಲ್ಲಿ 10 ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಗುತ್ತಿದೆ. ಗುತ್ತಿಗೆದಾರರೂ, ಅಧಿಕಾರಿಗಳು ಗುಣಮಟ್ಟದ ಕಾಮಗಾರಿಗೆ ಒತ್ತನ್ನು ನೀಡಬೇಕು. ಯಜಮಾನರು ಮತ್ತು ಮುಖಂಡರು ರಸ್ತೆ ಒತ್ತುವರಿಯನ್ನು ಬಿಡಿಸಿ, ಗುತ್ತಿಗೆದಾರರಿಗೆ ಸಹಕರಿಸುವ ಮೂಲಕ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿಸಿಕೊಳ್ಳಿ ಎಂದು ತಿಳಿಸಿದರು.
ಡಾ. ಅಂಬೇಡ್ಕರ್ ಸಮುದಾಯ ಭವನ ವೀಕ್ಷಣೆ-: ಗ್ರಾಮದಲ್ಲಿ ನಿರ್ಮಾಣ ಹಂತಲ್ಲಿರುವ ಡಾ. ಬಿ. ಆರ್.ಅಂಬೇಡ್ಕರ್ ಸಮುದಾಯ ಭವನ ವೀಕ್ಷಿಸಿದ ಅವರು ಆದಷ್ಟು ಬೇಗಾ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ ಎಂದು ಗ್ರಾಮಸ್ಥರಿಗೆ ತಿಳಿಸಿದರು.  ಈ ಸಂದರ್ಭದಲ್ಲಿ ಮಣಗಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಿದ್ದರಾಜು, ಮಾಜಿ ಸದಸ್ಯ ಕೆಂಪಯ್ಯ, ಯಜಮಾನರಾದ ಮಹಾಲಿಂಗ, ಜೈಭೀಮ್ ಮಹಾ ನಾಯಕ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಕುಮಾರ್, ಕಾರ್ಯದರ್ಶಿ ಮಲ್ಲುಸ್ವಾಮಿ, ಖಜಾಂಚಿ ಪ್ರತಾಪ್, ಕಾಳಕೆಂಪಯ್ಯ, ಪುಟ್ಟಸ್ವಾಮಿ, ಪ್ರತಾಪ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago