ಜಿಲ್ಲೆಗಳು

ಹನೂರು : ಸಿ.ಸಿ.ರಸ್ತೆ & ಚರಂಡಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ

ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮದಲ್ಲಿ ನೀರಾವರಿ ಇಲಾಖೆಯ ಎಸ್.ಇ.ಪಿ. ಯೋಜನೆಯ 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ನೀರಾವರಿ ಇಲಾಖೆ ಯ ಎಸ್.ಇ. ಪಿ.ಯೋಜನೆಯಡಿ ದೊಡ್ಡಿಂದುವಾಡಿ ಗ್ರಾಮದಲ್ಲಿ 50 ಲಕ್ಷ ರೂ.ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿ, ಹಾಗೂ ಮಣಗಳ್ಳಿ ಗ್ರಾಮದಲ್ಲಿ 10 ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಗುತ್ತಿದೆ. ಗುತ್ತಿಗೆದಾರರೂ, ಅಧಿಕಾರಿಗಳು ಗುಣಮಟ್ಟದ ಕಾಮಗಾರಿಗೆ ಒತ್ತನ್ನು ನೀಡಬೇಕು. ಯಜಮಾನರು ಮತ್ತು ಮುಖಂಡರು ರಸ್ತೆ ಒತ್ತುವರಿಯನ್ನು ಬಿಡಿಸಿ, ಗುತ್ತಿಗೆದಾರರಿಗೆ ಸಹಕರಿಸುವ ಮೂಲಕ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿಸಿಕೊಳ್ಳಿ ಎಂದು ತಿಳಿಸಿದರು.
ಡಾ. ಅಂಬೇಡ್ಕರ್ ಸಮುದಾಯ ಭವನ ವೀಕ್ಷಣೆ-: ಗ್ರಾಮದಲ್ಲಿ ನಿರ್ಮಾಣ ಹಂತಲ್ಲಿರುವ ಡಾ. ಬಿ. ಆರ್.ಅಂಬೇಡ್ಕರ್ ಸಮುದಾಯ ಭವನ ವೀಕ್ಷಿಸಿದ ಅವರು ಆದಷ್ಟು ಬೇಗಾ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ ಎಂದು ಗ್ರಾಮಸ್ಥರಿಗೆ ತಿಳಿಸಿದರು.  ಈ ಸಂದರ್ಭದಲ್ಲಿ ಮಣಗಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಿದ್ದರಾಜು, ಮಾಜಿ ಸದಸ್ಯ ಕೆಂಪಯ್ಯ, ಯಜಮಾನರಾದ ಮಹಾಲಿಂಗ, ಜೈಭೀಮ್ ಮಹಾ ನಾಯಕ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ ಕುಮಾರ್, ಕಾರ್ಯದರ್ಶಿ ಮಲ್ಲುಸ್ವಾಮಿ, ಖಜಾಂಚಿ ಪ್ರತಾಪ್, ಕಾಳಕೆಂಪಯ್ಯ, ಪುಟ್ಟಸ್ವಾಮಿ, ಪ್ರತಾಪ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

4 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

7 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

10 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

13 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

13 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

13 hours ago