ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
ಮೈಸೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 116.77 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಜ.20 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಬುಧವಾರ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2.93 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಕೆ.ಆರ್.ನಗರ ವಿಭಾಗ ಕಚೇರಿ, 2.50 ಕೋಟಿ ರೂ.ವೆಚ್ಚದ ಮದ್ದೂರು ವಿಭಾಗ ಕಚೇರಿ, 3.23 ಕೋಟಿ ರೂ. ವೆಚ್ಚದ ಮಡಿಕೇರಿ ವಿಭಾಗ ಕಚೇರಿ, 1.15 ಕೋಟಿ ರೂ. ವೆಚ್ಚದ ಮೈಸೂರಿನ ರಾಮಕೃಷ್ಣ ನಗರ ಉಪ ವಿಭಾಗ ಕಚೇರಿ, 1.09 ಕೋಟಿ ರೂ. ವೆಚ್ಚದ ಮಂಡ್ಯ ಜಿಲ್ಲೆಯ ಕೆರಗೋಡು ಉಪ ವಿಭಾಗ ಕಚೇರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.
4.61 ಕೋಟಿ ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಾಮಲಪುರದಲ್ಲಿ ನಿರ್ಮಿಸಿರುವ 66/11ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು ಉದ್ಘಾಟಿಸಲಾಗುವುದು.
ಶಾಖಾ ಕಚೇರಿಗಳ ಉದ್ಘಾಟನೆ (ಆವರಣದಲ್ಲಿರುವುದು ವೆಚ್ಚ)
ಮಂಡ್ಯ ಉಪ ವಿಭಾಗ ಕಚೇರಿ (87 ಲಕ್ಷ ರೂ.)
ಮೈಸೂರು ತಾಲ್ಲೂಕು ಜಯಪುರ (87 ಲಕ್ಷ ರೂ.)
ಹುಣಸೂರು ತಾಲ್ಲೂಕು ಗದ್ದಿಗೆ (63 ಲಕ್ಷ ರೂ.)
ಬಿ.ಮಟಕೆರೆ ಶಾಖಾ ಕಚೇರಿ (62 ಲಕ್ಷ ರೂ.)
ಹುಣಸೂರು ತಾಲ್ಲೂಕು ಹನಗೋಡು ( 63 ಲಕ್ಷ ರೂ.)
ಮೈಸೂರು ತಾಲ್ಲೂಕು ಆಲನಹಳ್ಳಿ (61 ಲಕ್ಷ ರೂ.)
ಮಂಡ್ಯ ಜಿಲ್ಲೆ ಬಸರಾಳು ( 40 ಲಕ್ಷ ರೂ.)
ಮಂಡ್ಯ ಜಿಲ್ಲೆ ಮಳವಳ್ಳಿ (40 ಲಕ್ಷ ರೂ.)
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…