ಜಿಲ್ಲೆಗಳು

ಸೆಸ್ಕ್: 116.77 ಕೋಟಿ ರೂ. ವೆಚ್ಚದ ಯೋಜನೆ

ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಮೈಸೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 116.77 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಜ.20 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ಬುಧವಾರ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2.93 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಕೆ.ಆರ್.ನಗರ ವಿಭಾಗ ಕಚೇರಿ, 2.50 ಕೋಟಿ ರೂ.ವೆಚ್ಚದ ಮದ್ದೂರು ವಿಭಾಗ ಕಚೇರಿ, 3.23 ಕೋಟಿ ರೂ. ವೆಚ್ಚದ ಮಡಿಕೇರಿ ವಿಭಾಗ ಕಚೇರಿ, 1.15 ಕೋಟಿ ರೂ. ವೆಚ್ಚದ ಮೈಸೂರಿನ ರಾಮಕೃಷ್ಣ ನಗರ ಉಪ ವಿಭಾಗ ಕಚೇರಿ, 1.09 ಕೋಟಿ ರೂ. ವೆಚ್ಚದ ಮಂಡ್ಯ ಜಿಲ್ಲೆಯ ಕೆರಗೋಡು ಉಪ ವಿಭಾಗ ಕಚೇರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.

4.61 ಕೋಟಿ ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಾಮಲಪುರದಲ್ಲಿ ನಿರ್ಮಿಸಿರುವ 66/11ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು ಉದ್ಘಾಟಿಸಲಾಗುವುದು.

ಶಾಖಾ ಕಚೇರಿಗಳ ಉದ್ಘಾಟನೆ (ಆವರಣದಲ್ಲಿರುವುದು ವೆಚ್ಚ)

ಮಂಡ್ಯ ಉಪ ವಿಭಾಗ ಕಚೇರಿ (87 ಲಕ್ಷ ರೂ.)

ಮೈಸೂರು ತಾಲ್ಲೂಕು ಜಯಪುರ (87 ಲಕ್ಷ ರೂ.)

ಹುಣಸೂರು ತಾಲ್ಲೂಕು ಗದ್ದಿಗೆ (63 ಲಕ್ಷ ರೂ.)

ಬಿ.ಮಟಕೆರೆ ಶಾಖಾ ಕಚೇರಿ (62 ಲಕ್ಷ ರೂ.)

ಹುಣಸೂರು ತಾಲ್ಲೂಕು ಹನಗೋಡು ( 63 ಲಕ್ಷ ರೂ.)

ಮೈಸೂರು ತಾಲ್ಲೂಕು ಆಲನಹಳ್ಳಿ (61 ಲಕ್ಷ ರೂ.)

ಮಂಡ್ಯ ಜಿಲ್ಲೆ ಬಸರಾಳು ( 40 ಲಕ್ಷ ರೂ.)

ಮಂಡ್ಯ ಜಿಲ್ಲೆ ಮಳವಳ್ಳಿ (40 ಲಕ್ಷ ರೂ.)

andolanait

Recent Posts

ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ: ಮೂಲಗಳಿಂದ ಮಾಹಿತಿ

ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್‌…

4 mins ago

ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡಿದರೆ, ಹೊರ್ಮುಜ್‌ ಸಂಪೂರ್ಣ ಮುಚ್ಚುತ್ತೇವೆ : ಅಮೆರಿಕಗೆ ಇರಾನ್‌ ಎಚ್ಚರಿಕೆ

ಟೆಹ್ರಾನ್ : ಪಶ್ಚಿಮ ಏಷ್ಯಾದಲ್ಲಿನ ಯುದ್ಧಕ್ಕೆ ಶೀಘ್ರವೇ ಅಂತ್ಯ ಹಾಡುವುದಾಗಿ ಶನಿವಾರವಷ್ಟೆ ಹೇಳಿದ್ದ ಟ್ರಂಪ್‌, ಈಗ ಇರಾನ್‌ ಮೇಲಿನ ದಾಳಿಗಳನ್ನು…

29 mins ago

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

1 hour ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

2 hours ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

2 hours ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

2 hours ago