ಜಿಲ್ಲೆಗಳು

ಸೆಸ್ಕ್: 116.77 ಕೋಟಿ ರೂ. ವೆಚ್ಚದ ಯೋಜನೆ

ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಮೈಸೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 116.77 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಜ.20 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ಬುಧವಾರ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2.93 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಕೆ.ಆರ್.ನಗರ ವಿಭಾಗ ಕಚೇರಿ, 2.50 ಕೋಟಿ ರೂ.ವೆಚ್ಚದ ಮದ್ದೂರು ವಿಭಾಗ ಕಚೇರಿ, 3.23 ಕೋಟಿ ರೂ. ವೆಚ್ಚದ ಮಡಿಕೇರಿ ವಿಭಾಗ ಕಚೇರಿ, 1.15 ಕೋಟಿ ರೂ. ವೆಚ್ಚದ ಮೈಸೂರಿನ ರಾಮಕೃಷ್ಣ ನಗರ ಉಪ ವಿಭಾಗ ಕಚೇರಿ, 1.09 ಕೋಟಿ ರೂ. ವೆಚ್ಚದ ಮಂಡ್ಯ ಜಿಲ್ಲೆಯ ಕೆರಗೋಡು ಉಪ ವಿಭಾಗ ಕಚೇರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.

4.61 ಕೋಟಿ ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಾಮಲಪುರದಲ್ಲಿ ನಿರ್ಮಿಸಿರುವ 66/11ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು ಉದ್ಘಾಟಿಸಲಾಗುವುದು.

ಶಾಖಾ ಕಚೇರಿಗಳ ಉದ್ಘಾಟನೆ (ಆವರಣದಲ್ಲಿರುವುದು ವೆಚ್ಚ)

ಮಂಡ್ಯ ಉಪ ವಿಭಾಗ ಕಚೇರಿ (87 ಲಕ್ಷ ರೂ.)

ಮೈಸೂರು ತಾಲ್ಲೂಕು ಜಯಪುರ (87 ಲಕ್ಷ ರೂ.)

ಹುಣಸೂರು ತಾಲ್ಲೂಕು ಗದ್ದಿಗೆ (63 ಲಕ್ಷ ರೂ.)

ಬಿ.ಮಟಕೆರೆ ಶಾಖಾ ಕಚೇರಿ (62 ಲಕ್ಷ ರೂ.)

ಹುಣಸೂರು ತಾಲ್ಲೂಕು ಹನಗೋಡು ( 63 ಲಕ್ಷ ರೂ.)

ಮೈಸೂರು ತಾಲ್ಲೂಕು ಆಲನಹಳ್ಳಿ (61 ಲಕ್ಷ ರೂ.)

ಮಂಡ್ಯ ಜಿಲ್ಲೆ ಬಸರಾಳು ( 40 ಲಕ್ಷ ರೂ.)

ಮಂಡ್ಯ ಜಿಲ್ಲೆ ಮಳವಳ್ಳಿ (40 ಲಕ್ಷ ರೂ.)

andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

10 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

10 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago