ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
ಮೈಸೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 116.77 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಜ.20 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಬುಧವಾರ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2.93 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಕೆ.ಆರ್.ನಗರ ವಿಭಾಗ ಕಚೇರಿ, 2.50 ಕೋಟಿ ರೂ.ವೆಚ್ಚದ ಮದ್ದೂರು ವಿಭಾಗ ಕಚೇರಿ, 3.23 ಕೋಟಿ ರೂ. ವೆಚ್ಚದ ಮಡಿಕೇರಿ ವಿಭಾಗ ಕಚೇರಿ, 1.15 ಕೋಟಿ ರೂ. ವೆಚ್ಚದ ಮೈಸೂರಿನ ರಾಮಕೃಷ್ಣ ನಗರ ಉಪ ವಿಭಾಗ ಕಚೇರಿ, 1.09 ಕೋಟಿ ರೂ. ವೆಚ್ಚದ ಮಂಡ್ಯ ಜಿಲ್ಲೆಯ ಕೆರಗೋಡು ಉಪ ವಿಭಾಗ ಕಚೇರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.
4.61 ಕೋಟಿ ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಾಮಲಪುರದಲ್ಲಿ ನಿರ್ಮಿಸಿರುವ 66/11ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು ಉದ್ಘಾಟಿಸಲಾಗುವುದು.
ಶಾಖಾ ಕಚೇರಿಗಳ ಉದ್ಘಾಟನೆ (ಆವರಣದಲ್ಲಿರುವುದು ವೆಚ್ಚ)
ಮಂಡ್ಯ ಉಪ ವಿಭಾಗ ಕಚೇರಿ (87 ಲಕ್ಷ ರೂ.)
ಮೈಸೂರು ತಾಲ್ಲೂಕು ಜಯಪುರ (87 ಲಕ್ಷ ರೂ.)
ಹುಣಸೂರು ತಾಲ್ಲೂಕು ಗದ್ದಿಗೆ (63 ಲಕ್ಷ ರೂ.)
ಬಿ.ಮಟಕೆರೆ ಶಾಖಾ ಕಚೇರಿ (62 ಲಕ್ಷ ರೂ.)
ಹುಣಸೂರು ತಾಲ್ಲೂಕು ಹನಗೋಡು ( 63 ಲಕ್ಷ ರೂ.)
ಮೈಸೂರು ತಾಲ್ಲೂಕು ಆಲನಹಳ್ಳಿ (61 ಲಕ್ಷ ರೂ.)
ಮಂಡ್ಯ ಜಿಲ್ಲೆ ಬಸರಾಳು ( 40 ಲಕ್ಷ ರೂ.)
ಮಂಡ್ಯ ಜಿಲ್ಲೆ ಮಳವಳ್ಳಿ (40 ಲಕ್ಷ ರೂ.)
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…