ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
ಮೈಸೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 116.77 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಜ.20 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಬುಧವಾರ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2.93 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಕೆ.ಆರ್.ನಗರ ವಿಭಾಗ ಕಚೇರಿ, 2.50 ಕೋಟಿ ರೂ.ವೆಚ್ಚದ ಮದ್ದೂರು ವಿಭಾಗ ಕಚೇರಿ, 3.23 ಕೋಟಿ ರೂ. ವೆಚ್ಚದ ಮಡಿಕೇರಿ ವಿಭಾಗ ಕಚೇರಿ, 1.15 ಕೋಟಿ ರೂ. ವೆಚ್ಚದ ಮೈಸೂರಿನ ರಾಮಕೃಷ್ಣ ನಗರ ಉಪ ವಿಭಾಗ ಕಚೇರಿ, 1.09 ಕೋಟಿ ರೂ. ವೆಚ್ಚದ ಮಂಡ್ಯ ಜಿಲ್ಲೆಯ ಕೆರಗೋಡು ಉಪ ವಿಭಾಗ ಕಚೇರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.
4.61 ಕೋಟಿ ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಾಮಲಪುರದಲ್ಲಿ ನಿರ್ಮಿಸಿರುವ 66/11ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು ಉದ್ಘಾಟಿಸಲಾಗುವುದು.
ಶಾಖಾ ಕಚೇರಿಗಳ ಉದ್ಘಾಟನೆ (ಆವರಣದಲ್ಲಿರುವುದು ವೆಚ್ಚ)
ಮಂಡ್ಯ ಉಪ ವಿಭಾಗ ಕಚೇರಿ (87 ಲಕ್ಷ ರೂ.)
ಮೈಸೂರು ತಾಲ್ಲೂಕು ಜಯಪುರ (87 ಲಕ್ಷ ರೂ.)
ಹುಣಸೂರು ತಾಲ್ಲೂಕು ಗದ್ದಿಗೆ (63 ಲಕ್ಷ ರೂ.)
ಬಿ.ಮಟಕೆರೆ ಶಾಖಾ ಕಚೇರಿ (62 ಲಕ್ಷ ರೂ.)
ಹುಣಸೂರು ತಾಲ್ಲೂಕು ಹನಗೋಡು ( 63 ಲಕ್ಷ ರೂ.)
ಮೈಸೂರು ತಾಲ್ಲೂಕು ಆಲನಹಳ್ಳಿ (61 ಲಕ್ಷ ರೂ.)
ಮಂಡ್ಯ ಜಿಲ್ಲೆ ಬಸರಾಳು ( 40 ಲಕ್ಷ ರೂ.)
ಮಂಡ್ಯ ಜಿಲ್ಲೆ ಮಳವಳ್ಳಿ (40 ಲಕ್ಷ ರೂ.)
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…