ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
ಮೈಸೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 116.77 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಜ.20 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಬುಧವಾರ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 2.93 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಕೆ.ಆರ್.ನಗರ ವಿಭಾಗ ಕಚೇರಿ, 2.50 ಕೋಟಿ ರೂ.ವೆಚ್ಚದ ಮದ್ದೂರು ವಿಭಾಗ ಕಚೇರಿ, 3.23 ಕೋಟಿ ರೂ. ವೆಚ್ಚದ ಮಡಿಕೇರಿ ವಿಭಾಗ ಕಚೇರಿ, 1.15 ಕೋಟಿ ರೂ. ವೆಚ್ಚದ ಮೈಸೂರಿನ ರಾಮಕೃಷ್ಣ ನಗರ ಉಪ ವಿಭಾಗ ಕಚೇರಿ, 1.09 ಕೋಟಿ ರೂ. ವೆಚ್ಚದ ಮಂಡ್ಯ ಜಿಲ್ಲೆಯ ಕೆರಗೋಡು ಉಪ ವಿಭಾಗ ಕಚೇರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.
4.61 ಕೋಟಿ ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಾಮಲಪುರದಲ್ಲಿ ನಿರ್ಮಿಸಿರುವ 66/11ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು ಉದ್ಘಾಟಿಸಲಾಗುವುದು.
ಶಾಖಾ ಕಚೇರಿಗಳ ಉದ್ಘಾಟನೆ (ಆವರಣದಲ್ಲಿರುವುದು ವೆಚ್ಚ)
ಮಂಡ್ಯ ಉಪ ವಿಭಾಗ ಕಚೇರಿ (87 ಲಕ್ಷ ರೂ.)
ಮೈಸೂರು ತಾಲ್ಲೂಕು ಜಯಪುರ (87 ಲಕ್ಷ ರೂ.)
ಹುಣಸೂರು ತಾಲ್ಲೂಕು ಗದ್ದಿಗೆ (63 ಲಕ್ಷ ರೂ.)
ಬಿ.ಮಟಕೆರೆ ಶಾಖಾ ಕಚೇರಿ (62 ಲಕ್ಷ ರೂ.)
ಹುಣಸೂರು ತಾಲ್ಲೂಕು ಹನಗೋಡು ( 63 ಲಕ್ಷ ರೂ.)
ಮೈಸೂರು ತಾಲ್ಲೂಕು ಆಲನಹಳ್ಳಿ (61 ಲಕ್ಷ ರೂ.)
ಮಂಡ್ಯ ಜಿಲ್ಲೆ ಬಸರಾಳು ( 40 ಲಕ್ಷ ರೂ.)
ಮಂಡ್ಯ ಜಿಲ್ಲೆ ಮಳವಳ್ಳಿ (40 ಲಕ್ಷ ರೂ.)
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…