ಚಾಮರಾಜನಗರ: ವಿಶೇಷಚೇತನ ಮಕ್ಕಳ ಜಾತ್ರೆಯನ್ನು ಮಾ 4 ರಂದು ಮಾರ್ಗದರ್ಶಿ ವಿಶೇಷಚೇತನರ ಸ್ವಯಂಸೇವಾ ಸಂಸ್ಥೆ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಯೋಜಕಿ ಲೀನಾಕುಮಾರಿ ತಿಳಿಸಿದರು.
ರಾಮಸಮುದ್ರ ಬಡಾವಣೆಯಲ್ಲಿರುವ ಸಂತ ಫ್ರಾನ್ಸಿಸ್ ಶಾಲೆ ಆವಣರದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಜಾತ್ರೆ ನಡೆಯಲಿದ್ದು, ವಿಶೇಷಚೇತನ ಮಕ್ಕಳು ಬಂದು ಹೋಗಲು ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಕೋವಿಡ್ ಕಾರಣದಿಂದಾಗಿ 3 ವರ್ಷಗಳಿಂದ ಜಾತ್ರೆ ನಡೆಸಲಾಗಿರಲಿಲ್ಲ. ಈ ಬಾರಿ ಜಿಲ್ಲೆಯ ಐದೂ ತಾಲ್ಲೂಕಿನ 3 ರಿಂದ 16 ವರ್ಷದ ವಿಶೇಷಚೇತನ ಮಕ್ಕಳಿಗೆ ಜಾತ್ರೆ ಆಯೋಜಿಸಲಾಗಿದೆ. ಸುವಾರು 650ಕ್ಕೂ ಹೆಚ್ಚು ಮಕ್ಕಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ರೋಟರಿ ಸಿಲ್ಕ್ ಸಿಟಿ ಮಾಜಿ ಅಧ್ಯಕ್ಷ ಡಿ.ಎಸ್.ಗಿರೀಶ್ ಮಾತನಾಡಿ, ಜಾತ್ರೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಆಟದ ಸಾಮಗ್ರಿ, ತಂಪು ಪಾನೀಯ, ಕಬ್ಬಿನ ಹಾಲು, ಕುಡಿಯುವ ನೀರು ಹಾಗೂ ತಿಂಡಿ-ತಿನಿಸುಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ತಾಲ್ಲೂಕು ಸಂಯೋಜಕಿ ಕೋಮಲ, ಮಾರ್ಗದರ್ಶಕರಾದ ಕವಿತಾ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…