ಚಾಮರಾಜನಗರ: ವಿಶೇಷಚೇತನ ಮಕ್ಕಳ ಜಾತ್ರೆಯನ್ನು ಮಾ 4 ರಂದು ಮಾರ್ಗದರ್ಶಿ ವಿಶೇಷಚೇತನರ ಸ್ವಯಂಸೇವಾ ಸಂಸ್ಥೆ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಯೋಜಕಿ ಲೀನಾಕುಮಾರಿ ತಿಳಿಸಿದರು.
ರಾಮಸಮುದ್ರ ಬಡಾವಣೆಯಲ್ಲಿರುವ ಸಂತ ಫ್ರಾನ್ಸಿಸ್ ಶಾಲೆ ಆವಣರದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಜಾತ್ರೆ ನಡೆಯಲಿದ್ದು, ವಿಶೇಷಚೇತನ ಮಕ್ಕಳು ಬಂದು ಹೋಗಲು ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಕೋವಿಡ್ ಕಾರಣದಿಂದಾಗಿ 3 ವರ್ಷಗಳಿಂದ ಜಾತ್ರೆ ನಡೆಸಲಾಗಿರಲಿಲ್ಲ. ಈ ಬಾರಿ ಜಿಲ್ಲೆಯ ಐದೂ ತಾಲ್ಲೂಕಿನ 3 ರಿಂದ 16 ವರ್ಷದ ವಿಶೇಷಚೇತನ ಮಕ್ಕಳಿಗೆ ಜಾತ್ರೆ ಆಯೋಜಿಸಲಾಗಿದೆ. ಸುವಾರು 650ಕ್ಕೂ ಹೆಚ್ಚು ಮಕ್ಕಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ರೋಟರಿ ಸಿಲ್ಕ್ ಸಿಟಿ ಮಾಜಿ ಅಧ್ಯಕ್ಷ ಡಿ.ಎಸ್.ಗಿರೀಶ್ ಮಾತನಾಡಿ, ಜಾತ್ರೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಆಟದ ಸಾಮಗ್ರಿ, ತಂಪು ಪಾನೀಯ, ಕಬ್ಬಿನ ಹಾಲು, ಕುಡಿಯುವ ನೀರು ಹಾಗೂ ತಿಂಡಿ-ತಿನಿಸುಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ತಾಲ್ಲೂಕು ಸಂಯೋಜಕಿ ಕೋಮಲ, ಮಾರ್ಗದರ್ಶಕರಾದ ಕವಿತಾ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…