ಚಾಮರಾಜನಗರ: ಪರಿಶಿಷ್ಟ ಸಮುದಾಯದವರು ಹೆಚ್ಚಾಗಿರುವ ತಾಲ್ಲೂಕಿನ ಚಿಕ್ಕಹೊಳೆ, ಚಿಕ್ಕಹೊಳೆ ಚೆಕ್ಪೋಸ್ಟ್ ಗ್ರಾಮದ ಸಮೀಪ ಸ್ಮಶಾನ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬ ಒತ್ತುವರಿ ಮಾಡಿ ದಾರಿ ಬಂದ್ ಮಾಡಿದ್ದು ಇವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.
ಸ್ಮಶಾನ ಭೂಮಿ ಎದುರು ಜಮಾಯಿಸಿ ಗ್ರಾಮಸ್ಥರು, ಮಹೇಶ್ ಎಂಬವರು ತಮ್ಮ ಜಮೀನಿನೊಂದಿಗೆ ಸ್ಮಶಾನ ಜಾಗವನ್ನು ಒತ್ತುವರಿ ಮಾಡಿಕೊಂಡು ಶವ ಹೂಳುವುದಕ್ಕೆ ತೊಂದರೆ ನೀಡುತ್ತಿದ್ದಾರೆ. ಇದನ್ನು ಪ್ರಶ್ನೆ ಮಾಡಲು ಹೋದ ಗ್ರಾಮಸ್ಥರನ್ನೇ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಗ್ರಾಮಸ್ಥರು ದೂರಿದರು.
ಸುಮಾರು 70 ವರ್ಷಗಳಿಂದಲೂ ಎರಡೂ ಗ್ರಾಮದವರು ಸರ್ಕಾರಿ ಜಮೀನು 38ಪಿ1 ರಲ್ಲಿ 4ಎಕರೆ ಸರ್ಕಾರಿ ಭೂಮಿಯನ್ನು ಸ್ಮಶಾನವಾಗಿ ಬಳಕೆ ಮಾಡಿಕೊಳ್ಳುತ್ತಾ ಬಂದಿದ್ದೇವೆ. ಗ್ರಾಮ ಪಂಚಾಯಿತಿಯವರು ಇಲ್ಲಿ ಬೋರ್ವೆಲ್ ಕೊರೆದು ಪಂಪ್ಹೌಸ್ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಈಗ ಏಕಾಏಕಿ ಒತ್ತುವರಿ ಮಾಡಿಕೊಂಡು ಸ್ಮಶಾನದ ದಾರಿಯನ್ನು ಬಂದ್ ಮಾಡಿದ್ದು ಕೂಡಲೇ ಇದನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸುವುದಾಗಿ ಎಂದಾಗಿ ಮಹದೇವಯ್ಯ ತಿಳಿಸಿದರು.
ಗ್ರಾಪಂ ಸದಸ್ಯರಾದ ಚೆಕ್ಪೋಸ್ಟ್ ಮೂರ್ತಿ, ಪ್ರಶಾಂತ್, ಸಿದ್ದಯ್ಯನಪುರದ ಮಂಜು, ಮುಖಂಡರಾದ ಕುಮಾರ್, ಅಂಗಡಿ ವಿನೋದ್, ಕಾರ್ತಿಕ್, ನಾಗೇಂದ್ರ, ರವಿ, ಸೆಲ್ವೆ ದೊರೆ, ನಾಗೇಗೌಡ, ಮೋಹನ್ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…