ಚಾಮರಾಜನಗರ: ನಗರದ ವಸತಿ ರಹಿತ ನಿರಾಶ್ರಿತರ ತಂಗುದಾಣದಲ್ಲಿ ವಿಶ್ವ ವಸತಿ ರಹಿತರ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಕೌಶಲ್ಯಾಭಿವೃದ್ದಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಗರಸಭೆ, ಹಾಗೂ ಮೂಡಲಧ್ವನಿ ವೃದ್ದಾಶ್ರಮ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ನಗರ ಯೋಜನಾ ನಿರ್ದೇಶಕ ಸುಧಾ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ನಾನಾ ಕಾರಣಗಳಿಂದ ವಯೋವೃದ್ದರು ವಸತಿ ರಹಿತರಾಗುತ್ತಾರೆ ಅಂತಹವರ ಆರೈಕೆಗಾಗಿ ನಗರಸಭೆ ಡೇ ನಲ್ಮ್ ಯೋಜನೆಯಡಿಯಲ್ಲಿ ತೆರೆದಿರುವ ವಸತಿ ರಹಿತ ನಿರಾಶ್ರಿತರ ಆಶ್ರಯ ತಂಗುದಾಣದಲ್ಲಿ ವಯೋವೃದ್ದರಿಗೆ ಆಶ್ರಯ ನೀಡುವ ಜೊತೆಗೆ ಅವರ ಸಂಪೂರ್ಣ ಯೋಗಕ್ಷೇಮ ನೋಡಿಕೊಳ್ಳಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಉತ್ತಮ ನಿರ್ವಹಣೆಯ ಮೂಡಲಧ್ವನಿ ನಿರಾಶ್ರಿತರ ಕೇಂದ್ರವಾಗಿದ್ದು, ಇಲ್ಲಿಯ ವೃದ್ದರು ತಮ್ಮ ಆರೋಗ್ಯ ಕಡೆ ಹೆಚ್ಚು ಗಮನಕೊಡಬೇಕು ಪ್ರತಿನಿತ್ಯ ಯೋಗ, ಧ್ಯಾನ ಮಾಡುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಯೋಜನಾಧಿಕಾರಿ ವೆಂಕಟನಾಯಕ್, ಡಾ.ಉಮಾರಾಣಿ, ಕೌಶಲ್ಯ ಇಲಾಖೆ ವ್ಯವಸ್ಥಾಪಕ ಡಾ.ಪುಟ್ಟಸ್ವಾಮಿ, ಅಂಜಾದ್ ಪಾಷ, ಅನ್ಸರ್ ಖಾನ್, ನವೀನ್, ಮೂಡಲಧ್ವನಿ ವೃದ್ದಾಶ್ರಮದ ಅಧ್ಯಕ್ಷ ಶಂಕರ್ ಇತರರು ಹಾಜರಿದ್ದರು.
ಆರೋಗ್ಯತಪಾಸಣೆ:
ಇದೇ ಸಂದರ್ಭದಲ್ಲಿ ಆಶ್ರಮದ ವಯೋವೃದ್ದರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ, ಉಚಿತ ಔ಼ಷದೋಪಚಾರ ಮಾಡಲಾಯಿತು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…