ಜಿಲ್ಲೆಗಳು

ಚಾ.ನಗರ : ವಿಶ್ವ ವಸತಿ ರಹಿತರ ದಿನಾಚರಣೆ

ಚಾಮರಾಜನಗರ: ನಗರದ ವಸತಿ ರಹಿತ ನಿರಾಶ್ರಿತರ ತಂಗುದಾಣದಲ್ಲಿ ವಿಶ್ವ ವಸತಿ ರಹಿತರ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಕೌಶಲ್ಯಾಭಿವೃದ್ದಿ , ಉದ್ಯಮಶೀಲತೆ  ಮತ್ತು ಜೀವನೋಪಾಯ ಇಲಾಖೆ, ನಗರಸಭೆ,  ಹಾಗೂ ಮೂಡಲಧ್ವನಿ ವೃದ್ದಾಶ್ರಮ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ನಗರ ಯೋಜನಾ ನಿರ್ದೇಶಕ ಸುಧಾ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ನಾನಾ ಕಾರಣಗಳಿಂದ ವಯೋವೃದ್ದರು ವಸತಿ ರಹಿತರಾಗುತ್ತಾರೆ ಅಂತಹವರ ಆರೈಕೆಗಾಗಿ ನಗರಸಭೆ ಡೇ ನಲ್ಮ್ ಯೋಜನೆಯಡಿಯಲ್ಲಿ  ತೆರೆದಿರುವ ವಸತಿ ರಹಿತ ನಿರಾಶ್ರಿತರ ಆಶ್ರಯ ತಂಗುದಾಣದಲ್ಲಿ ವಯೋವೃದ್ದರಿಗೆ ಆಶ್ರಯ ನೀಡುವ  ಜೊತೆಗೆ ಅವರ ಸಂಪೂರ್ಣ ಯೋಗಕ್ಷೇಮ ನೋಡಿಕೊಳ್ಳಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಉತ್ತಮ ನಿರ್ವಹಣೆಯ ಮೂಡಲಧ್ವನಿ ನಿರಾಶ್ರಿತರ ಕೇಂದ್ರವಾಗಿದ್ದು, ಇಲ್ಲಿಯ ವೃದ್ದರು ತಮ್ಮ ಆರೋಗ್ಯ ಕಡೆ ಹೆಚ್ಚು ಗಮನಕೊಡಬೇಕು  ಪ್ರತಿನಿತ್ಯ ಯೋಗ, ಧ್ಯಾನ ಮಾಡುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಯೋಜನಾಧಿಕಾರಿ ವೆಂಕಟನಾಯಕ್, ಡಾ.ಉಮಾರಾಣಿ,  ಕೌಶಲ್ಯ ಇಲಾಖೆ ವ್ಯವಸ್ಥಾಪಕ ಡಾ.ಪುಟ್ಟಸ್ವಾಮಿ,  ಅಂಜಾದ್ ಪಾಷ, ಅನ್ಸರ್ ಖಾನ್, ನವೀನ್, ಮೂಡಲಧ್ವನಿ ವೃದ್ದಾಶ್ರಮದ ಅಧ್ಯಕ್ಷ ಶಂಕರ್ ಇತರರು ಹಾಜರಿದ್ದರು.
ಆರೋಗ್ಯತಪಾಸಣೆ:
ಇದೇ ಸಂದರ್ಭದಲ್ಲಿ ಆಶ್ರಮದ ವಯೋವೃದ್ದರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ, ಉಚಿತ ಔ಼ಷದೋಪಚಾರ ಮಾಡಲಾಯಿತು.

andolanait

Recent Posts

ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…

1 hour ago

ದೇವರಾಜ ಅರಸು ಸೇತುವೆ ಮೇಲೆ ಸಂಚಾರ ನಿರ್ಬಂಧ

ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…

2 hours ago

2 ತಿಂಗಳಾದರೂ ಕೋಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ

ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ  ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…

2 hours ago

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೇಕು ಸರ್ಜರಿ

ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…

2 hours ago

ತಗ್ಗದ ಗ್ಯಾಸ್ ಟ್ರಬಲ್; ಕೈಸುಡುತ್ತಿದೆ ತಿಂಡಿ ಬಿಲ್!

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…

2 hours ago