ಚಾಮರಾಜನಗರ: ನಗರದ ವಸತಿ ರಹಿತ ನಿರಾಶ್ರಿತರ ತಂಗುದಾಣದಲ್ಲಿ ವಿಶ್ವ ವಸತಿ ರಹಿತರ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಕೌಶಲ್ಯಾಭಿವೃದ್ದಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಗರಸಭೆ, ಹಾಗೂ ಮೂಡಲಧ್ವನಿ ವೃದ್ದಾಶ್ರಮ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ನಗರ ಯೋಜನಾ ನಿರ್ದೇಶಕ ಸುಧಾ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ನಾನಾ ಕಾರಣಗಳಿಂದ ವಯೋವೃದ್ದರು ವಸತಿ ರಹಿತರಾಗುತ್ತಾರೆ ಅಂತಹವರ ಆರೈಕೆಗಾಗಿ ನಗರಸಭೆ ಡೇ ನಲ್ಮ್ ಯೋಜನೆಯಡಿಯಲ್ಲಿ ತೆರೆದಿರುವ ವಸತಿ ರಹಿತ ನಿರಾಶ್ರಿತರ ಆಶ್ರಯ ತಂಗುದಾಣದಲ್ಲಿ ವಯೋವೃದ್ದರಿಗೆ ಆಶ್ರಯ ನೀಡುವ ಜೊತೆಗೆ ಅವರ ಸಂಪೂರ್ಣ ಯೋಗಕ್ಷೇಮ ನೋಡಿಕೊಳ್ಳಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಉತ್ತಮ ನಿರ್ವಹಣೆಯ ಮೂಡಲಧ್ವನಿ ನಿರಾಶ್ರಿತರ ಕೇಂದ್ರವಾಗಿದ್ದು, ಇಲ್ಲಿಯ ವೃದ್ದರು ತಮ್ಮ ಆರೋಗ್ಯ ಕಡೆ ಹೆಚ್ಚು ಗಮನಕೊಡಬೇಕು ಪ್ರತಿನಿತ್ಯ ಯೋಗ, ಧ್ಯಾನ ಮಾಡುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಯೋಜನಾಧಿಕಾರಿ ವೆಂಕಟನಾಯಕ್, ಡಾ.ಉಮಾರಾಣಿ, ಕೌಶಲ್ಯ ಇಲಾಖೆ ವ್ಯವಸ್ಥಾಪಕ ಡಾ.ಪುಟ್ಟಸ್ವಾಮಿ, ಅಂಜಾದ್ ಪಾಷ, ಅನ್ಸರ್ ಖಾನ್, ನವೀನ್, ಮೂಡಲಧ್ವನಿ ವೃದ್ದಾಶ್ರಮದ ಅಧ್ಯಕ್ಷ ಶಂಕರ್ ಇತರರು ಹಾಜರಿದ್ದರು.
ಆರೋಗ್ಯತಪಾಸಣೆ:
ಇದೇ ಸಂದರ್ಭದಲ್ಲಿ ಆಶ್ರಮದ ವಯೋವೃದ್ದರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ, ಉಚಿತ ಔ಼ಷದೋಪಚಾರ ಮಾಡಲಾಯಿತು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…