ಜಿಲ್ಲೆಗಳು

ಸಗಣಿ ಗುಡ್ಡದಲ್ಲೇ ಹೊರಳಾಡಿ ಸೆಗಣಿ ಉಂಡೆಗಳಿಂದ ಹೊಡೆದಾಡಿದರು ..!

ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗೊರೆಹಬ್ಬ ಆಚರಣೆ

ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗ್ರಾಮಸ್ಥರು ಸೆಗಣಿಯ ಗುಡ್ಡದಲ್ಲೇ ಹೊರಳಾಡಿ, ಸೆಗಣಿ ಉಂಡೆಗಳಿಂದ ಹೊಡೆದಾಡಿ ವಿಶಿಷ್ಟವಾಗಿ ʼ ಗೊರೆ ಹಬ್ಬ’ ಆಚರಿಸಿದರು.
ಗ್ರಾಮದಲ್ಲಿ ಸಹಬಾಳ್ವೆ ಬೆಸೆಯುವ ಈ ಗೊರೆಹಬ್ಬವನ್ನು ಕನ್ನಡಿಗರೇ ಹೆಚ್ಚಿರುವ ಗುಮ್ಮಟಾಪುರದಲ್ಲಿ ತಲೆಮಾರುಗಳಿಂದ ಆಚರಿಸಲಾಗುತ್ತಿದೆ. ಪ್ರತಿವರ್ಷ ದೀಪಾವಳಿಯ ಬಲಿಪಾಡ್ಯಮಿ ಮಾರನೇ ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ.
ಈ ವಿಶೇಷ ಹಬ್ಬ ನೋಡಲು ಸುತ್ತಲಿನ ಗ್ರಾಮಗಳ ಜನರು ಹಾಗೂ ಸಂಬಂಧಿಕರು, ನೆಂಟರು ಸೇರಿ ಸಾವಿರಾರು ಮಂದಿ ಬರುತ್ತಾರೆ. ದೀಪಾವಳಿ ಹಬ್ಬ ಬರುವುದನ್ನೇ ಕಾಯುವ ಇಲ್ಲಿನ ಯುವಕರು ಎಲ್ಲಿಲ್ಲದ ಹುಮ್ಮಸ್ಸಿನಿಂದ ಸಗಣಿ ಎರಚಾಡುವ ಮೂಲಕ ಸಂಭ್ರಮಿಸುತ್ತಾರೆ.
ಗುರುವಾರ ಮಧ್ಯಾಹ್ನ 3ಕ್ಕೆ ಪ್ರಾರಂಭವಾದ ಈ ಹಬ್ಬ ಸುಮಾರು ಒಂದೂವರೆ ತಾಸುಗಳ ಕಾಲ ನಡೆದು ನೂರಾರು ಯುವಕರು-ವಯಸ್ಕರು ದಪ್ಪ ದಪ್ಪ ಸಗಣಿ ಉಂಡೆ ಕಟ್ಟಿ ಪರಸ್ಪರ ಹೊಡೆದಾಡಿದರು.

ಹಬ್ಬದ ಹಿನ್ನೆಲೆ: ಗ್ರಾಮದ ಬೀರೇಶ್ವರ ಸ್ವಾಮಿಯ ಪ್ರೀತ್ಯರ್ಥವಾಗಿ ಗೊರೆಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬಕ್ಕೆ ನೂರಾರು ವರ್ಷಗಳ ಇತಿಹಾಸವಿದೆ.
ಹಿರಿಯರ ಪ್ರಕಾರ, ಗ್ರಾಮದ ಕಾಳೇಗೌಡ ಎಂಬುವವರ ಮನೆಗೆ ಉತ್ತರ ದೇಶದಿಂದ ದೇವರ ಗುಡ್ಡನೊಬ್ಬ ಬಂದಿದ್ದ. ಅವನು ಸತ್ತ ಮೇಲೆ ಅವನ ಜೋಳಿಗೆ, ಬೆತ್ತ, ಎಲ್ಲವನ್ನು ತಿಪ್ಪೆ ಗುಂಡಿಗೆ ಬಿಸಾಕಿದರಂತೆ. ಕೆಲವು ದಿನಗಳ ನಂತರ ಆ ತಿಪ್ಪೆಗುಂಡಿ ಬಳಿಗೆ ಎತ್ತಿನ ಗಾಡಿಯೊಂದು ಹೋದಾಗ ಲಿಂಗವೊಂದು ಕಾಣಿಸಿಕೊಂಡಿತು. ಗಾಡಿಯ ಚಕ್ರ ಲಿಂಗದ ಮೇಲೆ ಹರಿದಾಗ ಅದರಿಂದ ರಕ್ತ ಬಂದಿತ್ತು. ಆಗ ಗ್ರಾಮದ ಮುಖಂಡರ ಕನಸಿನಲ್ಲಿ ದೇವರ ಗುಡ್ಡಪ್ಪ ಕಾಣಿಸಿಕೊಂಡು ದೀಪಾವಳಿ ಹಬ್ಬವಾದ ಮರುದಿನವೇ ಗೊರೆಹಬ್ಬ ಮಾಡುವಂತೆ ಹೇಳಿದ್ದ ಎಂಬ ಪ್ರತೀತಿ ಇದೆ. ಲಿಂಗ ಕಾಣಿಸಿಕೊಂಡ ತಿಪ್ಪೆಗುಂಡಿಯಲ್ಲೇ ಬೀರಪ್ಪನ ದೇವಸ್ಥಾನ ಕಟ್ಟಿ ಗೊರೆಹಬ್ಬವನ್ನು ಆಚರಿಸಲಾಗುತ್ತಿದೆ.

ಚಾಡಿಕೋರನಿಗೆ ನಿಂದನೆ: ಹಬ್ಬ ಆರಂಭಕ್ಕೂ ಮುನ್ನ ಕೆರೆಯಂಗಳದಲ್ಲಿ ಕತ್ತೆಯನ್ನು ತೊಳೆದು ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಸೆಗಣಿ ಎರಚಾಡುವ ಬೀರಪ್ಪನ ಗುಡಿವರೆಗೆ ಕರೆ ತರಲಾಗುತ್ತದೆ.
ನಂತರ ಕತ್ತೆಯನ್ನು ತೊಳೆಯಲಾಗಿದ್ದ ಕೆರೆಯಲ್ಲಿ ಎಲ್ಲರೂ ಸ್ನಾನ ಮಾಡಿಕೊಂಡು ಊರಿಗೆ ಬರುವಾಗ ಚಾಡಿಕೋರನನ್ನು ಹೀಯಾಳಿಸುತ್ತಾ, ಊರ ಗೌಡನನ್ನು ಅಶ್ಲೀಲ ಶಬ್ದಗಳಿಂದ ಬಯ್ಯತ್ತಾ ಸಂಭ್ರಮಿಸಿ ಕೇಕೆ ಹಾಕುವುದು ನಡೆದುಕೊಂಡ ಬಂದ ರೂಢಿ. ಆಧುನಿಕತೆಯ ಎಲ್ಲ ಸೌಕರ್ಯಗಳು ಈ ಗ್ರಾಮಕ್ಕೂ ಕಾಲಿಟ್ಟಿವೆ. ಆದರೆ ತಲೆತಲಾಂತರದಿಂದ ಬಂದ ಈ ಹಬ್ಬವನ್ನು ಗ್ರಾಮಸ್ಥರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

andolanait

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

53 mins ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

1 hour ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

1 hour ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

2 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

2 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

3 hours ago