ಜಿಲ್ಲೆಗಳು

ಕಂದೇಗಾಲದಲ್ಲಿ ಸಿದ್ದಪ್ಪಾಜಿ ಕಂಡಾಯೋತ್ಸವ

ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಸಿದ್ದಪ್ಪಾಜಿ ಕಂಡಾಯೋತ್ಸವ ನಡೆಯಿತು.

ಸುಮಾರು ಹತ್ತಾರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಈ ಒಂದು ಉತ್ಸವದಲ್ಲಿ ಸುತ್ತಲಿನ ಕೊಡಹಳ್ಳಿ, ಶಿವಪುರ, ಕೆಬ್ಬೇಪುರ, ಅಂಕಹಳ್ಳಿ, ಬಾಚಹಳ್ಳಿ, ಯಲಚಟ್ಟಿ ಗ್ರಾಮಗಳಿಂದ ನೂರಾರು ಜನರು ಆಗಮಿಸಿ ಸಿದ್ದಪ್ಪಾಜಿಗೆ ಪೂಜೆ, ಪುನಸ್ಕಾರ ಸಲ್ಲಿಸಿ ಭಕ್ತಿ ಭಾವ ಮೆರೆದರು‌.
ವಿವಿಧ ಹೂವು, ಹೊಂಬಾಳೆಯೊಂದಿನ ಅಲಂಕೃತಗೊಂಡಿದ್ದ ಕಂಡಾಯ, ಸತ್ತಿಗೆ ಸೂರಿಪಾನಿಯನ್ನು ತಮಟೆ ಸದ್ದಿನೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಕಂಡಾಯೋತ್ಸವ ಸಾಗುತ್ತಿದ್ದ ವೇಳೆ ಮಹಿಳೆಯರು ಕಜ್ಜಾಯದ ಪೂಜೆಯನ್ನು ಸಲ್ಲಿಸಿ ಭಕ್ತಿಭಾವ ಮೆರೆದರು.
ಉತ್ಸವದ ಹಿನ್ನೆಯಲ್ಲಿ ಬೀದಿಗಳನ್ನು ಸ್ವಚ್ಛಗೊಳಿಸಿ, ಮನೆಗಳ ಮುಂದೆ ಬಿಡಿಸಿದ ರಂಗೋಲಿ, ಪುನೀತ್ ಚಿತ್ರಗಳು ಗಮನಸೆಳೆದವು. ಕುಂದಕೆರೆ, ಮಲ್ಲಮನಹುಂಡಿ, ಬರಟಹಳ್ಳಿ ಗ್ರಾಮಗಳಿಂದ ಕರೆತಂದಿದ್ದ ಕಂಡಾಯಗಳನ್ನು ಸಿದ್ದಪ್ಪಾಜಿ ಗುಂಡಂದಿರು, ದಾಸರ ಒಕ್ಕಲಿಗರು ಹೊತ್ತು ಸಾಗಿದರು. ಈ ವೇಳೆ ಹರಗ ಕುಣಿತ, ಮಹಿಳಾ ಸಂಘದವರ ಜಾನಪದ ಗೀತೆಗಳನ್ನು ಹಾಡಿದರು.
ಯಜಮಾನರಾದ ರಾಚಯ್ಯ,
ಚಿಕ್ಕಬಸವಯ್ಯ, ಚಿಕ್ಕಂಡಯ್ಯ, ದಾಸಯ್ಯ, ಬಸವಯ್ಯ, ಕೊಂತಯ್ಯ ಸಿದ್ದಯ್ಯ, ಪುಟ್ಟರಾಚಯ್ಯ, ಮೊತ್ತಗಯ್ಯ ಸಿದ್ದಯ್ಯ, ಕಣ್ಣಯ್ಯ, ಬಸವಯ್ಯ, ಪುಟ್ಟನಿಂಗಯ್ಯ, ಕುಳ್ಳಪತ್ತಯ್ಯ ಸಿದ್ದಯ್ಯ, ಚಿಕ್ಕರಾಚಯ್ಯ, ಸಿದ್ದಣ್ಣ ಬಸವಯ್ಯ, ಸಿದ್ದರಾಜು, ಕೆ.ಬಿ.ಶಿವರಾಜು, ದೊರೆಸ್ವಾಮಿ, ಕೃಷ್ಣ, ಪಾಪಣ್ಣ, ರಾಜು, ವೆಂಕಟೇಶ್, ಮಹೇಶ್, ಅಪ್ಪು ಅಭಿಮಾನಿ ಬಳಗದ ಯುವಕರು, ಮುಖಂಡರು ಹಾಜರಿದ್ದರು..

andolanait

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

2 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

5 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

6 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

8 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

11 hours ago