ಜಿಲ್ಲೆಗಳು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ ಮಾತನಾಡಿ, ಗ್ಯಾಜ್ಯುಯಿಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು, ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷನ ನೀಡಬೇಕು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ, ಬಲಿಷ್ಠಪಡಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗರತ್ನ ಮಾತನಾಡಿ, ನಿವೃತ್ತಿಯಾಗಿರುವ ಅಂಗನವಾಡಿ ನೌಕರರಿಗೆ ಗ್ಯಾಜ್ಯುಯಿಟಿ ನೀಡಬೇಕು. ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮೊಬೈಲ್‌ನಲ್ಲಿ ೩ ಬಾರಿ ಲಿಖಿತ ರೂಪದಲ್ಲಿ ಪ್ರತಿ ನಿತ್ಯ ೨ ಬಾರಿ ಹಾಜರಾತಿ ಪುಸ್ತಕಗಳನ್ನು ಕಾರ್ಯಕರ್ತೆ ಬರೆಯಬೇಕು ಎನ್ನುವುದೇ ಮುಖ್ಯ ಕೆಲಸವಾಗಬಾರದು. ಆದ್ದರಿಂದ ಮೊಬೈಲ್ ಅಥವಾ ಪುಸ್ತಕ ಯಾವುದಾದರೊಂದರಲ್ಲಿ ಬರೆಯುವುದನ್ನು ನಿರ್ಧರಿಸಬೇಕು. ಮೊಬೈಲ್ ನಲ್ಲಿ ಮಾಡಬೇಕಾದರೆ ಮೊಬೈಲ್ ಕೊಟ್ಟು ೪ ವರ್ಷಗಳು ಕಳೆದಿದೆ ಮೊಬೈಲ್ ಹಳೆಯದಾಗಿದ್ದು, ಯಾವುದೇ ಕಾರ್ಯಕ್ರಮ ಕೆಲಸ ಮಾಡುತ್ತಿಲ್ಲ. ಆಗಾಗಿ ಮೊಬೈಲ್ ಮೂಲಕ ದಾಖಲಾತಿ ಬರೆಯಬೇಕಾದರೆ ಹೊಸ ಮೊಬೈಲ್ ಕೊಡಬೇಕು. ಕಳೆದ ೯ ತಿಂಗಳನಿAದ ಮೊಟ್ಟೆ ಕೊಟ್ಟಿಲ್ಲ. ತಕ್ಷಣದಲ್ಲಿ ಮೊಟ್ಟೆ ಕೊಡಬೇಕು. ಮುಂಗಡ ಹಣ ಕಟ್ಟಬೇಕು. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಖಜಾಂಚಿ ಜೆ.ಭಾಗ್ಯ, ಚಾಮರಾಜನಗರ ತಾಲೂಕು ಕಾರ್ಯದರ್ಶಿ ಶಾಹಿದಾಬಾನು, ಖಜಾಂಚಿ ಎನ್.ಎಸ್.ಗುರುಲಿಂಗಯ್ಯ, ಯಳಂದೂರು ತಾಲೂಕು ಅಧ್ಯಕ್ಷೆ ಮಿನಾಕ್ಷಿ, ಕಾರ್ಯದರ್ಶಿ ಭಾಗ್ಯ, ಖಜಾಂಚಿ ಕೆಂಪಮ್ಮ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷೆ ಸುಜಿಯಾ, ಕಾರ್ಯದರ್ಶಿ ಗುರುಮಲ್ಲಮ್ಮ, ಖಜಾಂಚಿ ಸುಮಿತ್ರ, ಸಂತೇಮರಹಳ್ಳಿ ಅಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ತುಳಸಮ್ಮ, ಖಜಾಂಚಿ ಜಯಮಾಲ, ಸದಸ್ಯರಾದ ರೇವಮ್ಮ, ಅನುಸೂಯ, ಪುಷ್ಷ, ರಾಜಮ್ಮ, ಸರೋಜ, ಸುನೀತರಾಣಿ, ಕಾಂಚನಾ, ಸುಧಾ, ಭಾಗ್ಯಲಕ್ಷ್ಮಿ, ಅನಿತ, ದೇವಮ್ಮ, ಮಂಜಮ್ಮ, ನಿರ್ಮಲ, ರೋಜಕುಮಾರಿ, ಮಹದೇವಮ್ಮ, ಮಂಜುಳ, ಪ್ರೇಮಲತಾ, ಪುಟ್ಟಮ್ಮ, ತುಳಸಮ್ಮ, ನೀಲಾಂಬಿಕೆ, ಸವಿತಾ, ಮೀನಾ, ರೇಣಿಕಾ, ಮಹೇಶ್ವರಿ, ತಾಜುನ್ ಇತರರು ಭಾಗವಹಿಸಿದ್ದರು.

andolanait

Recent Posts

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

18 mins ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

22 mins ago

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

55 mins ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

1 hour ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

2 hours ago