ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ ಮಾತನಾಡಿ, ಗ್ಯಾಜ್ಯುಯಿಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು, ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷನ ನೀಡಬೇಕು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ, ಬಲಿಷ್ಠಪಡಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗರತ್ನ ಮಾತನಾಡಿ, ನಿವೃತ್ತಿಯಾಗಿರುವ ಅಂಗನವಾಡಿ ನೌಕರರಿಗೆ ಗ್ಯಾಜ್ಯುಯಿಟಿ ನೀಡಬೇಕು. ಅಂಗನವಾಡಿಯಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮೊಬೈಲ್ನಲ್ಲಿ ೩ ಬಾರಿ ಲಿಖಿತ ರೂಪದಲ್ಲಿ ಪ್ರತಿ ನಿತ್ಯ ೨ ಬಾರಿ ಹಾಜರಾತಿ ಪುಸ್ತಕಗಳನ್ನು ಕಾರ್ಯಕರ್ತೆ ಬರೆಯಬೇಕು ಎನ್ನುವುದೇ ಮುಖ್ಯ ಕೆಲಸವಾಗಬಾರದು. ಆದ್ದರಿಂದ ಮೊಬೈಲ್ ಅಥವಾ ಪುಸ್ತಕ ಯಾವುದಾದರೊಂದರಲ್ಲಿ ಬರೆಯುವುದನ್ನು ನಿರ್ಧರಿಸಬೇಕು. ಮೊಬೈಲ್ ನಲ್ಲಿ ಮಾಡಬೇಕಾದರೆ ಮೊಬೈಲ್ ಕೊಟ್ಟು ೪ ವರ್ಷಗಳು ಕಳೆದಿದೆ ಮೊಬೈಲ್ ಹಳೆಯದಾಗಿದ್ದು, ಯಾವುದೇ ಕಾರ್ಯಕ್ರಮ ಕೆಲಸ ಮಾಡುತ್ತಿಲ್ಲ. ಆಗಾಗಿ ಮೊಬೈಲ್ ಮೂಲಕ ದಾಖಲಾತಿ ಬರೆಯಬೇಕಾದರೆ ಹೊಸ ಮೊಬೈಲ್ ಕೊಡಬೇಕು. ಕಳೆದ ೯ ತಿಂಗಳನಿAದ ಮೊಟ್ಟೆ ಕೊಟ್ಟಿಲ್ಲ. ತಕ್ಷಣದಲ್ಲಿ ಮೊಟ್ಟೆ ಕೊಡಬೇಕು. ಮುಂಗಡ ಹಣ ಕಟ್ಟಬೇಕು. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಖಜಾಂಚಿ ಜೆ.ಭಾಗ್ಯ, ಚಾಮರಾಜನಗರ ತಾಲೂಕು ಕಾರ್ಯದರ್ಶಿ ಶಾಹಿದಾಬಾನು, ಖಜಾಂಚಿ ಎನ್.ಎಸ್.ಗುರುಲಿಂಗಯ್ಯ, ಯಳಂದೂರು ತಾಲೂಕು ಅಧ್ಯಕ್ಷೆ ಮಿನಾಕ್ಷಿ, ಕಾರ್ಯದರ್ಶಿ ಭಾಗ್ಯ, ಖಜಾಂಚಿ ಕೆಂಪಮ್ಮ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷೆ ಸುಜಿಯಾ, ಕಾರ್ಯದರ್ಶಿ ಗುರುಮಲ್ಲಮ್ಮ, ಖಜಾಂಚಿ ಸುಮಿತ್ರ, ಸಂತೇಮರಹಳ್ಳಿ ಅಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ತುಳಸಮ್ಮ, ಖಜಾಂಚಿ ಜಯಮಾಲ, ಸದಸ್ಯರಾದ ರೇವಮ್ಮ, ಅನುಸೂಯ, ಪುಷ್ಷ, ರಾಜಮ್ಮ, ಸರೋಜ, ಸುನೀತರಾಣಿ, ಕಾಂಚನಾ, ಸುಧಾ, ಭಾಗ್ಯಲಕ್ಷ್ಮಿ, ಅನಿತ, ದೇವಮ್ಮ, ಮಂಜಮ್ಮ, ನಿರ್ಮಲ, ರೋಜಕುಮಾರಿ, ಮಹದೇವಮ್ಮ, ಮಂಜುಳ, ಪ್ರೇಮಲತಾ, ಪುಟ್ಟಮ್ಮ, ತುಳಸಮ್ಮ, ನೀಲಾಂಬಿಕೆ, ಸವಿತಾ, ಮೀನಾ, ರೇಣಿಕಾ, ಮಹೇಶ್ವರಿ, ತಾಜುನ್ ಇತರರು ಭಾಗವಹಿಸಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…