ಜಿಲ್ಲೆಗಳು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ ಮಾತನಾಡಿ, ಗ್ಯಾಜ್ಯುಯಿಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು, ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷನ ನೀಡಬೇಕು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ, ಬಲಿಷ್ಠಪಡಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗರತ್ನ ಮಾತನಾಡಿ, ನಿವೃತ್ತಿಯಾಗಿರುವ ಅಂಗನವಾಡಿ ನೌಕರರಿಗೆ ಗ್ಯಾಜ್ಯುಯಿಟಿ ನೀಡಬೇಕು. ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮೊಬೈಲ್‌ನಲ್ಲಿ ೩ ಬಾರಿ ಲಿಖಿತ ರೂಪದಲ್ಲಿ ಪ್ರತಿ ನಿತ್ಯ ೨ ಬಾರಿ ಹಾಜರಾತಿ ಪುಸ್ತಕಗಳನ್ನು ಕಾರ್ಯಕರ್ತೆ ಬರೆಯಬೇಕು ಎನ್ನುವುದೇ ಮುಖ್ಯ ಕೆಲಸವಾಗಬಾರದು. ಆದ್ದರಿಂದ ಮೊಬೈಲ್ ಅಥವಾ ಪುಸ್ತಕ ಯಾವುದಾದರೊಂದರಲ್ಲಿ ಬರೆಯುವುದನ್ನು ನಿರ್ಧರಿಸಬೇಕು. ಮೊಬೈಲ್ ನಲ್ಲಿ ಮಾಡಬೇಕಾದರೆ ಮೊಬೈಲ್ ಕೊಟ್ಟು ೪ ವರ್ಷಗಳು ಕಳೆದಿದೆ ಮೊಬೈಲ್ ಹಳೆಯದಾಗಿದ್ದು, ಯಾವುದೇ ಕಾರ್ಯಕ್ರಮ ಕೆಲಸ ಮಾಡುತ್ತಿಲ್ಲ. ಆಗಾಗಿ ಮೊಬೈಲ್ ಮೂಲಕ ದಾಖಲಾತಿ ಬರೆಯಬೇಕಾದರೆ ಹೊಸ ಮೊಬೈಲ್ ಕೊಡಬೇಕು. ಕಳೆದ ೯ ತಿಂಗಳನಿAದ ಮೊಟ್ಟೆ ಕೊಟ್ಟಿಲ್ಲ. ತಕ್ಷಣದಲ್ಲಿ ಮೊಟ್ಟೆ ಕೊಡಬೇಕು. ಮುಂಗಡ ಹಣ ಕಟ್ಟಬೇಕು. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಖಜಾಂಚಿ ಜೆ.ಭಾಗ್ಯ, ಚಾಮರಾಜನಗರ ತಾಲೂಕು ಕಾರ್ಯದರ್ಶಿ ಶಾಹಿದಾಬಾನು, ಖಜಾಂಚಿ ಎನ್.ಎಸ್.ಗುರುಲಿಂಗಯ್ಯ, ಯಳಂದೂರು ತಾಲೂಕು ಅಧ್ಯಕ್ಷೆ ಮಿನಾಕ್ಷಿ, ಕಾರ್ಯದರ್ಶಿ ಭಾಗ್ಯ, ಖಜಾಂಚಿ ಕೆಂಪಮ್ಮ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷೆ ಸುಜಿಯಾ, ಕಾರ್ಯದರ್ಶಿ ಗುರುಮಲ್ಲಮ್ಮ, ಖಜಾಂಚಿ ಸುಮಿತ್ರ, ಸಂತೇಮರಹಳ್ಳಿ ಅಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ತುಳಸಮ್ಮ, ಖಜಾಂಚಿ ಜಯಮಾಲ, ಸದಸ್ಯರಾದ ರೇವಮ್ಮ, ಅನುಸೂಯ, ಪುಷ್ಷ, ರಾಜಮ್ಮ, ಸರೋಜ, ಸುನೀತರಾಣಿ, ಕಾಂಚನಾ, ಸುಧಾ, ಭಾಗ್ಯಲಕ್ಷ್ಮಿ, ಅನಿತ, ದೇವಮ್ಮ, ಮಂಜಮ್ಮ, ನಿರ್ಮಲ, ರೋಜಕುಮಾರಿ, ಮಹದೇವಮ್ಮ, ಮಂಜುಳ, ಪ್ರೇಮಲತಾ, ಪುಟ್ಟಮ್ಮ, ತುಳಸಮ್ಮ, ನೀಲಾಂಬಿಕೆ, ಸವಿತಾ, ಮೀನಾ, ರೇಣಿಕಾ, ಮಹೇಶ್ವರಿ, ತಾಜುನ್ ಇತರರು ಭಾಗವಹಿಸಿದ್ದರು.

andolanait

Recent Posts

ಹನೂರು: ನಾಳೆ ಚಂದ್ರಗಹಣವಿದ್ದರೂ ಭಕ್ತರಿಗೆ ಮಹದೇಶ್ವರನ ದರ್ಶನಕ್ಕಿಲ್ಲ ತೊಂದರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ…

19 seconds ago

ಹುದ್ದೆಗಳ ಭರ್ತಿ ನಡೆಯಲಿ; ಯುವಶಕ್ತಿಯನ್ನು ಕಡೆಗಣಿಸದಿರಲಿ

ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, …

20 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಬಿಜೆಪಿ-ಜಾ.ದಳ ಪಾಳೆಯಗಳಿಗೆ  ಹರ್ಷ ತಂದಿರುವ ರಾಜ್ಯ ರಾಜಕಾರಣ

ಜಾ.ದಳ ಸಮಾವೇಶ, ಯಡಿಯೂರೋತ್ಸವದ ಮೂಲಕ ಮತದಾರರ ಗಮನ ಸೆಳೆಯಲು ಯತ್ನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಿಜೆಪಿ-ಜಾ.ದಳ ಪಾಳೆಯಗಳಿಗೆ ಹರ್ಷ ತಂದಿರುವುದು…

33 mins ago

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

4 hours ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

4 hours ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

4 hours ago