ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ ಮಾತನಾಡಿ, ಗ್ಯಾಜ್ಯುಯಿಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು, ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷನ ನೀಡಬೇಕು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ, ಬಲಿಷ್ಠಪಡಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗರತ್ನ ಮಾತನಾಡಿ, ನಿವೃತ್ತಿಯಾಗಿರುವ ಅಂಗನವಾಡಿ ನೌಕರರಿಗೆ ಗ್ಯಾಜ್ಯುಯಿಟಿ ನೀಡಬೇಕು. ಅಂಗನವಾಡಿಯಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮೊಬೈಲ್ನಲ್ಲಿ ೩ ಬಾರಿ ಲಿಖಿತ ರೂಪದಲ್ಲಿ ಪ್ರತಿ ನಿತ್ಯ ೨ ಬಾರಿ ಹಾಜರಾತಿ ಪುಸ್ತಕಗಳನ್ನು ಕಾರ್ಯಕರ್ತೆ ಬರೆಯಬೇಕು ಎನ್ನುವುದೇ ಮುಖ್ಯ ಕೆಲಸವಾಗಬಾರದು. ಆದ್ದರಿಂದ ಮೊಬೈಲ್ ಅಥವಾ ಪುಸ್ತಕ ಯಾವುದಾದರೊಂದರಲ್ಲಿ ಬರೆಯುವುದನ್ನು ನಿರ್ಧರಿಸಬೇಕು. ಮೊಬೈಲ್ ನಲ್ಲಿ ಮಾಡಬೇಕಾದರೆ ಮೊಬೈಲ್ ಕೊಟ್ಟು ೪ ವರ್ಷಗಳು ಕಳೆದಿದೆ ಮೊಬೈಲ್ ಹಳೆಯದಾಗಿದ್ದು, ಯಾವುದೇ ಕಾರ್ಯಕ್ರಮ ಕೆಲಸ ಮಾಡುತ್ತಿಲ್ಲ. ಆಗಾಗಿ ಮೊಬೈಲ್ ಮೂಲಕ ದಾಖಲಾತಿ ಬರೆಯಬೇಕಾದರೆ ಹೊಸ ಮೊಬೈಲ್ ಕೊಡಬೇಕು. ಕಳೆದ ೯ ತಿಂಗಳನಿAದ ಮೊಟ್ಟೆ ಕೊಟ್ಟಿಲ್ಲ. ತಕ್ಷಣದಲ್ಲಿ ಮೊಟ್ಟೆ ಕೊಡಬೇಕು. ಮುಂಗಡ ಹಣ ಕಟ್ಟಬೇಕು. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಖಜಾಂಚಿ ಜೆ.ಭಾಗ್ಯ, ಚಾಮರಾಜನಗರ ತಾಲೂಕು ಕಾರ್ಯದರ್ಶಿ ಶಾಹಿದಾಬಾನು, ಖಜಾಂಚಿ ಎನ್.ಎಸ್.ಗುರುಲಿಂಗಯ್ಯ, ಯಳಂದೂರು ತಾಲೂಕು ಅಧ್ಯಕ್ಷೆ ಮಿನಾಕ್ಷಿ, ಕಾರ್ಯದರ್ಶಿ ಭಾಗ್ಯ, ಖಜಾಂಚಿ ಕೆಂಪಮ್ಮ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷೆ ಸುಜಿಯಾ, ಕಾರ್ಯದರ್ಶಿ ಗುರುಮಲ್ಲಮ್ಮ, ಖಜಾಂಚಿ ಸುಮಿತ್ರ, ಸಂತೇಮರಹಳ್ಳಿ ಅಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ತುಳಸಮ್ಮ, ಖಜಾಂಚಿ ಜಯಮಾಲ, ಸದಸ್ಯರಾದ ರೇವಮ್ಮ, ಅನುಸೂಯ, ಪುಷ್ಷ, ರಾಜಮ್ಮ, ಸರೋಜ, ಸುನೀತರಾಣಿ, ಕಾಂಚನಾ, ಸುಧಾ, ಭಾಗ್ಯಲಕ್ಷ್ಮಿ, ಅನಿತ, ದೇವಮ್ಮ, ಮಂಜಮ್ಮ, ನಿರ್ಮಲ, ರೋಜಕುಮಾರಿ, ಮಹದೇವಮ್ಮ, ಮಂಜುಳ, ಪ್ರೇಮಲತಾ, ಪುಟ್ಟಮ್ಮ, ತುಳಸಮ್ಮ, ನೀಲಾಂಬಿಕೆ, ಸವಿತಾ, ಮೀನಾ, ರೇಣಿಕಾ, ಮಹೇಶ್ವರಿ, ತಾಜುನ್ ಇತರರು ಭಾಗವಹಿಸಿದ್ದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…