ಜಿಲ್ಲೆಗಳು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಕೆ.ಸುಜಾತ ಮಾತನಾಡಿ, ಗ್ಯಾಜ್ಯುಯಿಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು, ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷನ ನೀಡಬೇಕು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ, ಬಲಿಷ್ಠಪಡಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗರತ್ನ ಮಾತನಾಡಿ, ನಿವೃತ್ತಿಯಾಗಿರುವ ಅಂಗನವಾಡಿ ನೌಕರರಿಗೆ ಗ್ಯಾಜ್ಯುಯಿಟಿ ನೀಡಬೇಕು. ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮೊಬೈಲ್‌ನಲ್ಲಿ ೩ ಬಾರಿ ಲಿಖಿತ ರೂಪದಲ್ಲಿ ಪ್ರತಿ ನಿತ್ಯ ೨ ಬಾರಿ ಹಾಜರಾತಿ ಪುಸ್ತಕಗಳನ್ನು ಕಾರ್ಯಕರ್ತೆ ಬರೆಯಬೇಕು ಎನ್ನುವುದೇ ಮುಖ್ಯ ಕೆಲಸವಾಗಬಾರದು. ಆದ್ದರಿಂದ ಮೊಬೈಲ್ ಅಥವಾ ಪುಸ್ತಕ ಯಾವುದಾದರೊಂದರಲ್ಲಿ ಬರೆಯುವುದನ್ನು ನಿರ್ಧರಿಸಬೇಕು. ಮೊಬೈಲ್ ನಲ್ಲಿ ಮಾಡಬೇಕಾದರೆ ಮೊಬೈಲ್ ಕೊಟ್ಟು ೪ ವರ್ಷಗಳು ಕಳೆದಿದೆ ಮೊಬೈಲ್ ಹಳೆಯದಾಗಿದ್ದು, ಯಾವುದೇ ಕಾರ್ಯಕ್ರಮ ಕೆಲಸ ಮಾಡುತ್ತಿಲ್ಲ. ಆಗಾಗಿ ಮೊಬೈಲ್ ಮೂಲಕ ದಾಖಲಾತಿ ಬರೆಯಬೇಕಾದರೆ ಹೊಸ ಮೊಬೈಲ್ ಕೊಡಬೇಕು. ಕಳೆದ ೯ ತಿಂಗಳನಿAದ ಮೊಟ್ಟೆ ಕೊಟ್ಟಿಲ್ಲ. ತಕ್ಷಣದಲ್ಲಿ ಮೊಟ್ಟೆ ಕೊಡಬೇಕು. ಮುಂಗಡ ಹಣ ಕಟ್ಟಬೇಕು. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಖಜಾಂಚಿ ಜೆ.ಭಾಗ್ಯ, ಚಾಮರಾಜನಗರ ತಾಲೂಕು ಕಾರ್ಯದರ್ಶಿ ಶಾಹಿದಾಬಾನು, ಖಜಾಂಚಿ ಎನ್.ಎಸ್.ಗುರುಲಿಂಗಯ್ಯ, ಯಳಂದೂರು ತಾಲೂಕು ಅಧ್ಯಕ್ಷೆ ಮಿನಾಕ್ಷಿ, ಕಾರ್ಯದರ್ಶಿ ಭಾಗ್ಯ, ಖಜಾಂಚಿ ಕೆಂಪಮ್ಮ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷೆ ಸುಜಿಯಾ, ಕಾರ್ಯದರ್ಶಿ ಗುರುಮಲ್ಲಮ್ಮ, ಖಜಾಂಚಿ ಸುಮಿತ್ರ, ಸಂತೇಮರಹಳ್ಳಿ ಅಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ತುಳಸಮ್ಮ, ಖಜಾಂಚಿ ಜಯಮಾಲ, ಸದಸ್ಯರಾದ ರೇವಮ್ಮ, ಅನುಸೂಯ, ಪುಷ್ಷ, ರಾಜಮ್ಮ, ಸರೋಜ, ಸುನೀತರಾಣಿ, ಕಾಂಚನಾ, ಸುಧಾ, ಭಾಗ್ಯಲಕ್ಷ್ಮಿ, ಅನಿತ, ದೇವಮ್ಮ, ಮಂಜಮ್ಮ, ನಿರ್ಮಲ, ರೋಜಕುಮಾರಿ, ಮಹದೇವಮ್ಮ, ಮಂಜುಳ, ಪ್ರೇಮಲತಾ, ಪುಟ್ಟಮ್ಮ, ತುಳಸಮ್ಮ, ನೀಲಾಂಬಿಕೆ, ಸವಿತಾ, ಮೀನಾ, ರೇಣಿಕಾ, ಮಹೇಶ್ವರಿ, ತಾಜುನ್ ಇತರರು ಭಾಗವಹಿಸಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

3 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

8 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

9 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

10 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

10 hours ago