ಜಿಲ್ಲೆಗಳು

ಸ್ವಯಂ ಪ್ರೇರಿತ ರಕ್ತದಾನ ಮಾಡಿ ವಿಶಿಷ್ಟ ಪ್ರತಿಭಟನೆ

ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ

ಚಾಮರಾಜನಗರ: ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ವಿದ್ಯುತ್ ಪ್ರಸರಣ ನಿಗಮದ ನೌಕರರು ನಗರದ ಕ.ವಿ.ಪ್ರ.ನಿ.ನೌಕರರ ಸಂಸ್ಥೆಗಳ ಒಕ್ಕೂಟಗಳ ಕಚೇರಿ ಆವರಣದಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ ವಿಭಿನ್ನವಾಗಿ ಪ್ರತಿಭಟಿಸಿದರು.
ರಕ್ತಕೊಟ್ಟೇವು.. ಪಿಂಚಣಿ ಬಿಡೇವು ಎಂಬ ಘೋಷಣೆಯೊಂದಿಗೆ ನಡೆದ ರಕ್ತದಾನ ಶಿಬಿರಕ್ಕೆ ರಕ್ತದಾನ ಮಾಡಿ ಚಾಲನೆ ನೀಡಿ ಮಾತನಾಡಿದ ಸೆಸ್ಕಾಂ ಇಇ ಆರ್.ವಸಂತಕುಮಾರ್ ಅವರು, ನೂತನ ಪಿಂಚಣಿ ಯೋಜನೆಯಿಂದ ಸರ್ಕಾರಿ ನೌಕರರಿಗೆ ಯಾವುದೇ ಭದ್ರತೆ ಇಲ್ಲದಂತಾಗಿದೆ. ಆದರಿಂದ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಎನ್‌ಪಿಎಸ್ ಯೋಜನೆ ವಿರೋಧಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವತಿಯಿಂದ ಡಿ.೧೯ ರಂದು ಬೆಂಗಳೂರಿನ ಸ್ವಾತಂತ್ಯ ಉದ್ಯಾನವನದಲ್ಲಿ ಮಾಡು ಇಲ್ಲವೆ ಮಡಿ ಅನಿರ್ದಿಷ್ಠ ಹೋರಾಟ ಹಮ್ಮಿಕೊಳ್ಳಲಾಗಿದೆ. ಈ ಹೋರಾಟವನ್ನು ಬೆಂಬಲಿಸಬೇಕಿದೆ ಎಂದರು.
ಲೆಕ್ಕಾಧಿಕಾರಿ ಭಾಸ್ಕರ್, ಸಂಘದ ಕಾರ್ಯದರ್ಶಿ ಎಸ್. ಸಿದ್ದರಾಜಪ್ಪ, ಎಂ.ಮಹದೆವಸ್ವಾಮಿ, ಕಾರ್ಯದರ್ಶಿ ಚೆನ್ನಂಜಕುಮಾರ್, ಶರಣಬಸಪ್ಪ ಚಿನ್ನಪುರ, ಸುನೀಲ್, ರಕ್ತದಾನ ಮಾಡಿದರು
ಪ್ರತಿಭಟನೆಯಲ್ಲಿ ಎನ್.ಮಹೇಶ್, ಮುರಳಿಕೃಷ್ಣಸ್ವಾಮಿ, ಎಸ್.ಮಂಜುನಾಥ್, ಮಹೇಶ್, ರಮೇಶ್, ನಾಗರಾಜು, ಶಿವಪ್ಪ, ಸಿ.ರಾಜು, ಸೋಮಶೇಖರ್, ಡಾ.ಮಹೇಶ್, ಮಂಜುನಾಥ್ ಇತರಿದ್ದರು.

andolanait

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

8 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

8 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

8 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

9 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

9 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

9 hours ago