ಜಿಲ್ಲೆಗಳು

ಸ್ವಯಂ ಪ್ರೇರಿತ ರಕ್ತದಾನ ಮಾಡಿ ವಿಶಿಷ್ಟ ಪ್ರತಿಭಟನೆ

ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ

ಚಾಮರಾಜನಗರ: ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ವಿದ್ಯುತ್ ಪ್ರಸರಣ ನಿಗಮದ ನೌಕರರು ನಗರದ ಕ.ವಿ.ಪ್ರ.ನಿ.ನೌಕರರ ಸಂಸ್ಥೆಗಳ ಒಕ್ಕೂಟಗಳ ಕಚೇರಿ ಆವರಣದಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ ವಿಭಿನ್ನವಾಗಿ ಪ್ರತಿಭಟಿಸಿದರು.
ರಕ್ತಕೊಟ್ಟೇವು.. ಪಿಂಚಣಿ ಬಿಡೇವು ಎಂಬ ಘೋಷಣೆಯೊಂದಿಗೆ ನಡೆದ ರಕ್ತದಾನ ಶಿಬಿರಕ್ಕೆ ರಕ್ತದಾನ ಮಾಡಿ ಚಾಲನೆ ನೀಡಿ ಮಾತನಾಡಿದ ಸೆಸ್ಕಾಂ ಇಇ ಆರ್.ವಸಂತಕುಮಾರ್ ಅವರು, ನೂತನ ಪಿಂಚಣಿ ಯೋಜನೆಯಿಂದ ಸರ್ಕಾರಿ ನೌಕರರಿಗೆ ಯಾವುದೇ ಭದ್ರತೆ ಇಲ್ಲದಂತಾಗಿದೆ. ಆದರಿಂದ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಎನ್‌ಪಿಎಸ್ ಯೋಜನೆ ವಿರೋಧಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವತಿಯಿಂದ ಡಿ.೧೯ ರಂದು ಬೆಂಗಳೂರಿನ ಸ್ವಾತಂತ್ಯ ಉದ್ಯಾನವನದಲ್ಲಿ ಮಾಡು ಇಲ್ಲವೆ ಮಡಿ ಅನಿರ್ದಿಷ್ಠ ಹೋರಾಟ ಹಮ್ಮಿಕೊಳ್ಳಲಾಗಿದೆ. ಈ ಹೋರಾಟವನ್ನು ಬೆಂಬಲಿಸಬೇಕಿದೆ ಎಂದರು.
ಲೆಕ್ಕಾಧಿಕಾರಿ ಭಾಸ್ಕರ್, ಸಂಘದ ಕಾರ್ಯದರ್ಶಿ ಎಸ್. ಸಿದ್ದರಾಜಪ್ಪ, ಎಂ.ಮಹದೆವಸ್ವಾಮಿ, ಕಾರ್ಯದರ್ಶಿ ಚೆನ್ನಂಜಕುಮಾರ್, ಶರಣಬಸಪ್ಪ ಚಿನ್ನಪುರ, ಸುನೀಲ್, ರಕ್ತದಾನ ಮಾಡಿದರು
ಪ್ರತಿಭಟನೆಯಲ್ಲಿ ಎನ್.ಮಹೇಶ್, ಮುರಳಿಕೃಷ್ಣಸ್ವಾಮಿ, ಎಸ್.ಮಂಜುನಾಥ್, ಮಹೇಶ್, ರಮೇಶ್, ನಾಗರಾಜು, ಶಿವಪ್ಪ, ಸಿ.ರಾಜು, ಸೋಮಶೇಖರ್, ಡಾ.ಮಹೇಶ್, ಮಂಜುನಾಥ್ ಇತರಿದ್ದರು.

andolanait

Recent Posts

ಆಂದೋಲನ ಹಾಡುಪಾಡು | ಹುಲಿಯ ಕಣ್ಣಿನಲ್ಲಿ ಕಂಡ ನನ್ನದೇ ಪ್ರತಿಬಿಂಬ

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…

51 mins ago

ಅರಣ್ಯ ಸಿಬ್ಬಂದಿಗೆ ಇಲಾಖೆಯಿಂದ ಬೇಕಿದೆ ಪ್ರೋತ್ಸಾಹ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…

1 hour ago

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 26 ಶನಿವಾರ

1 hour ago

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

2 hours ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

11 hours ago